ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರೊಫೆಸರ್ ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹನೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ಹನೂರು ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದು ವಾಡಿ ಸಿದ್ದರಾಜ್ ಅವರು ಮಾತನಾಡಿದರು ಪ್ರೊಫೆಸರ್ ಬಿ ಕೃಷ್ಣಪ್ಪ ಅವರ 88ನೇ ಜನ್ಮ ದಿನಾಚರಣೆ ಅಂಗವಾಗಿ 9.06.2024 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹನೂರು ಘಟಕದ ವತಿಯಿಂದ ಸುಮಾರು ನೂರು ಸದಸ್ಯರು ಬಿ.ಕೃಷ್ಣಪ್ಪ ಅವರ ಹುಟ್ಟುಹಬ್ಬಕ್ಕೆ ಕಾರ್ಯಕ್ರಮಕ್ಕೆ ಹೊರಡಬೇಕಾಗಿ ತಿಳಿಸಿದರು. ಕಾರ್ಯಕ್ರಮಕ್ಕೆ ಹೊರಡಲು ಬಸ್ ವ್ಯವಸ್ಥೆ ಇರುತ್ತದೆ ಎಂದರು.
ಪ್ರೊಫೆಸರ್ ಬಿ.ಕೃಷ್ಣಪ್ಪ ಅವರು ದಲಿತರ ಸಮುದಾಯಗಳ ಮೇಲೆ ಶೋಷಣೆ ಹಿಂಸೆ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ ತಮ್ಮ ತನು,ಮನ, ಧನ ಧಾರೆಯೆರೆದು ದಲಿತ ಸಮುದಾಯ,ಶೋಷಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನ್ ವ್ಯಕ್ತಿ ಎಂದರು. ಆದ್ದರಿಂದ ಕಾರ್ಯಕರ್ತ ಇಂಥ ಮಹಾನ್ ವ್ಯಕ್ತಿಯ ಜನ್ಮಾಚರಣೆ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾದೇಶ್,ಜಿಲ್ಲಾ ಸಂಚಾಲಕ ವೀರ,ಸಂಘಟನಾ ಸಂಚಾಲಕ ಮುರುಗೇಶ್,ಕೊಳ್ಳೇಗಾಲ ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಶಿವ ಸ್ವಾಮಿ, ಕೊಳ್ಳೇಗಾಲ ಮಹಿಳಾ ಘಟಕ ಸಂಚಾಲಕಿ ವರಲಕ್ಷ್ಮಿ, ಹನೂರು ಮಹಿಳಾ ಘಟಕ ಕಿಶೋರ್ ವಳ್ಳಿ,ಜಿಲ್ಲಾ ಸಂಘಟನಾ ಸಂಚಾಲಕ ಹಿಂಡಯ್ಯ, ಸುಂದರಮ್ಮ,ಮರಿಯಮ್ಮ,ಶಿವಮ್ಮ,ಹನೂರ್ ನಾಗರಾಜ್ ಸೇರಿದಂತೆ ಇನ್ನಿತರ ದಲಿತ ಸಂಘರ್ಷ ಸಮಿತಿ ಸದಸ್ಯರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ