ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರು ಖರೀದಿಸಿದ ಕೃಷಿ ಸಾಮಗ್ರಿಗಳಿಗೆ ಕಡ್ಡಾಯವಾಗಿ ರಶೀದಿ ನೀಡಿ:ಸುನೀಲ್ ಕುಮಾರ್

ಯಾದಗಿರಿ/ವಡಗೇರಾ:ರೈತರು ಖರೀದಿಸಿದ ಕೃಷಿ ಸಾಮಗ್ರಿಗಳಿಗೆ ಕಡ್ಡಾಯವಾಗಿ ರಶೀದಿ ನೀಡಬೇಕು ಹಾಗೂ ರಸೀದಿಯ ಮೇಲೆ ಸಂಬಂಧಪಟ್ಟ ರೈತರ ಸಹಿ ಪಡೆಯಬೇಕೆಂದು ಕೃಷಿ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್ ಕೃಷಿ ಪರಿಕರ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ತಾಲೂಕಿನ ಕೃಷಿ ಪರಿಕರ (ರಸಗೊಬ್ಬರ,ಬೀಜ,ಕೀಟನಾಶಕ) ಮಾರಾಟಗಾರರ ಮುಂಗಾರು 2024ರ ಮುಂಗಾರು ಹಂಗಾಮು ಪೂರ್ವ ಸಭೆ ಹಾಗೂ ಕೃಷಿ ಪರಿಕರ ವಿತರಕರು ಮಾರಾಟಗಾರರಿಗೆ ಹಮ್ಮಿಕೊಂಡ ಗುಣ ನಿಯಂತ್ರಣ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು,ಬಿಲ್ ನೀಡದೇ ಇರುವುದು,ಅವಧಿ ಮೀರಿದ ಕೃಷಿ ಪರಿಕರಗಳನ್ನು ವಿತರಣೆ ಮಾಡುವುದು ಅಥವಾ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಮಾರಾಟಗಾರರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಯಾವುದೆ ಕಾರಣಕ್ಕೂ ಅವಧಿ ಮುಗಿದ ಕೀಟನಾಶಕಗಳನ್ನು ಮಾರಾಟ ಮಾಡಬಾರದು ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ರಸಗೊಬ್ಬರ ಬಿಟ್ಟರೆ ಬೇರೆ ಯಾವುದೇ ಸಾಮಾಗ್ರಿಗಳನ್ನು ಮಾರಾಟ ಮಾಡಬಾರದು ಮತ್ತು ಸ್ವಚ್ಚತೆಯನ್ನು ಕಾಪಾಡಿಕೊಳ್ಳಿ, ರೈತರಿಗೆ ಬಿತ್ತನೆ ಬೀಜ ಹಾಗೂ ಕಳಫೆ ರಸಗೊಬ್ಬರಗಳನ್ನು ವಿತರಣೆ ಮಾಡಬಾರದು ಅಂತಹ ಮಾರಾಟಗಾರರು ಕಂಡು ಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾರಾಟಗಾರರು ಯಾವುದೇ ಪರಿಕರಗಳನ್ನು ವಿತರಣೆ ಮಾಡುವಾಗ ಕಡ್ಡಾಯವಾಗಿ ಪಾಯಿಂಟ್ ಆಫ್ ಸೇಲ್ ಯಂತ್ರದ ಮೂಲಕ ಮಾರಾಟ ಮಾಡಬೇಕು,ಸ್ಟಾಕ್ ಬುಕ್ ದರಪಟ್ಟಿ ಬರೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ,ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಪರ್ವತರೆಡ್ಡಿಗೌಡ ಬೆಂಡೆಬೆಂಬಳಿ,ಗೌರವ ಅಧ್ಯಕ್ಷ ಬಸವರಾಜ ಸಾಹು ಸುಂಕೇಸರಾಳ,ಕೃಷಿ ಸಿಬ್ಬಂದಿ ರಾಜಶೇಖರ್ ಪಾಟೀಲ್ ಹಾಗೂ ತಾಲೂಕಿನ ಎಲ್ಲಾ ಕೃಷಿ ಪರಿಕರ ವಿತರಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ