ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಾಂಧಿಯ ತತ್ವಗಳೇ ಎನ್ ಎಸ್ ಎಸ್ ನ ಅಡಿಪಾಯ:ಡಾ.ಶುಭ ಮರವಂತೆ

ಶಿವಮೊಗ್ಗ: ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಮೇ 25 ರಿಂದ 31 ರವರೆಗೆ ಬಾಳೆಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಶಿಬಿರವನ್ನು ಉದ್ಘಾಟಿಸಿದ ಕುವೆಂಪು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ.ಶುಭ ಮರವಂತೆಯವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಗಾಂಧಿಯ ತತ್ವಗಳನ್ನು ಸ್ವಾತಂತ್ರೋತ್ತರದಲ್ಲೇ ಅಡಿಪಾಯವಾಗಿಟ್ಟುಕೊಂಡು ಪ್ರಾರಂಭಿಸಿದ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಮನ್ವಯತೆ,ಸೌಹಾರ್ದತೆ ಹಾಗೂ ಸ್ವಯಂಸೇವೆಯ ಮನೋಭಾವವನ್ನು ಮೂಡಿಸುತ್ತದೆ ಎಂದರು. ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ದೂರದೃಷ್ಟಿಯನ್ನು ವಿವರಿಸುತ್ತಾ ‘ನನಗಲ್ಲ ನಿನಗೆ’ ಎಂಬ ಧ್ಯೇಯ ವಾಕ್ಯವು ಬಹಳ ದೊಡ್ಡ ಮೌಲ್ಯವನ್ನು ವ್ಯಕ್ತಿತ್ವದಲ್ಲಿ ಸೇರ್ಪಡೆಗೊಳಿಸುತ್ತದೆ ಎಂದು ಅವರು ಉದಾಹರಣೆಗಳೊಂದಿಗೆ ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಬಾಳೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕವಿತಾ ವಾಸು, ಉಪಾಧ್ಯಕ್ಷರಾದ ಆಶಾ ಬಾಗೇಶ್,ಸದಸ್ಯರಾದ ಶ್ರೀಮತಿ ಆಶಾ ಜಯಣ್ಣ,ಶ್ರೀ ರುದ್ರಪ್ಪ, ಶ್ರೀಧರ್ಮಪ್ಪ, ಶ್ರೀ ಪ್ರಕಾಶ್,ಶ್ರೀಮತಿ ಕವಿತಾ ಗುತ್ತೇರ್ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ.ರಾಜೇಂದ್ರ ಚೆನ್ನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ವಹಿಸಿದ್ದರು.
ಏಳು ದಿನಗಳ ಶಿಬಿರದಲ್ಲಿ ಗ್ರಾಮದ ಸ್ವಚ್ಛತೆ,ಅರಿವಿನ ಕಾರ್ಯಕ್ರಮಗಳು,ಪಥ ಸಂಚಲನ,ಸುಬ್ಬಯ್ಯ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಾಗೂ ರೋಟರಿ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣದಲ್ಲಿ ನಡೆದ ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಶಾಲೆಯ ಗೋಡೆಗಳಿಗೆ ಹಸೆ ಚಿತ್ತಾರಗಳನ್ನು ಬರೆದರು.
ಮೇ 31 ರಂದು ಶಿಬಿರದ ಸಮಾರೋಪ ನುಡಿಗಳನ್ನಾಡಿದ ಕಾಲೇಜಿನ ಆಡಳಿತಾಧಿಕಾರಿಗಳಾದ ಪ್ರೊ.ರಾಮಚಂದ್ರ ಬಾಳಿಗಾರವರು ‘ಈ ಶಿಬಿರದಿಂದ ವಿದ್ಯಾರ್ಥಿಗಳು ಅತ್ಯುತ್ತಮವಾದ ಅನುಭವಗಳನ್ನು ಪಡೆದುಕೊಂಡಿದ್ದಾರೆ.ಇಂತಹ ಸಂಘಟನಾ ಕೌಶಲ್ಯ, ಸಂಯೋಜನೆಯ ಮನೋಭಾವ,ಹೊಂದಾಣಿಕೆಯ ಸಾಮರ್ಥ್ಯ ಇಂದು ಸಮಾಜವನ್ನು ಮುನ್ನಡೆಸಲು ಬಹಳ ಅಗತ್ಯ,ಈ ಕಲಿಕೆ ರಾಷ್ಟ್ರೀಯ ಸೇವಾ ಯೋಜನೆಯಿಂದ ಮಾತ್ರ ಸಾಧ್ಯ’ ಎಂದು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಾಳೆಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಲಿಂಗಪ್ಪನವರು ಶಿಬಿರದ ಕಲಿಕೆ ಒಂದು ರೀತಿಯ ಕಾರ್ಯಾನುಭವದ ಕಲಿಕೆ ಎಂದು ವಿಶ್ಲೇಷಿಸಿದರು.ಊರಿನ ಮುಖಂಡರು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಮಾದರಿ ನಡತೆಯನ್ನು ತೋರಿದ್ದಾರೆ, ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಶಿಬಿರಾಧಿಕಾರಿಗಳಾದ ಡಾ.ಸುಕೀರ್ತಿ ಹಾಗೂ ಶ್ರೀ ರಾಬರ್ಟ್ ರಾಯಪ್ಪನವರು ಶಿಬಿರದ ಅತ್ಯುತ್ತಮ ತಂಡ ಶರಾವತಿ ತಂಡ,ಅತ್ಯುತ್ತಮ ಸ್ವಯಂಸೇವಕ ಶ್ರೀ ಜನಾರ್ಧನ್ ಹಾಗೂ ಅತ್ಯುತ್ತಮ ಸ್ವಯಂ ಸೇವಕಿ ಕು.ಪ್ರಜ್ಞಾದೀಪ್ತಿ ಎಂದು ಘೋಷಿಸಿದರು. ಸಮಾರೋಪ ಸಮಾರಂಭದಲ್ಲಿ ಗ್ರಾಮದ ಮುಖಂಡರು,ಶಾಲೆಯ ಶಿಕ್ಷಕರು,ಕಾಲೇಜಿನ ಉಪನ್ಯಾಸಕರುಗಳು ಭಾಗವಹಿಸಿದ್ದರು.ಕಾಲೇಜಿನ ಹಿರಿಯ ಸ್ವಯಂಸೇವಕರಾದ,ಗಣರಾಜ್ಯ ಪಥಸಂಚಲನದಲ್ಲಿ ಕುವೆಂಪು ವಿವಿಯನ್ನು ಪ್ರತಿನಿಧಿಸಿದ್ದ ಶ್ರೀ ಹರ್ಷವರ್ಧನ್ ಹಾಗೂ ಕು.ಸಂಧ್ಯಾ ಶಿಬಿರದ ನಾಯಕತ್ವವನ್ನು ವಹಿಸಿದ್ದರು.ಒಟ್ಟಿನಲ್ಲಿ ಏಳು ದಿನಗಳ ಗ್ರಾಮವಾಸ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಬಾಳೆಕೊಪ್ಪ ಗ್ರಾಮದ ಜನರೊಂದಿಗೆ ಒಡನಾಡಲು,ಹಲವಾರು ಕೌಶಲ್ಯಗಳನ್ನು ಕಲಿಯಲು ಹಾಗೂ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ