ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೃತ್ತಿಪರ ಕೋರ್ಸ್ ಗಳಿಗೆ ವೈದ್ಯಕೀಯ ತಪಾಸಣೆ

ಬೆಂಗಳೂರು:ವೈದ್ಯಕೀಯ,ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಬಯಸಿರುವ ಅಭ್ಯರ್ಥಿಗಳಿಗೆ ಜೂನ್‌ 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ.
ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡುವರು.
783 ಅಭ್ಯರ್ಥಿಗಳು ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮೂರು ದಿನ ತಪಾಸಣೆ ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಮಾಹಿತಿ ನೀಡಿದ್ದಾರೆ.
ತಪಾಸಣೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.ಅವರ ಹೆಸರಿನ ಮುಂದೆ ಸೂಚಿಸಿದ ದಿನ ವೈದ್ಯಕೀಯ ತಪಾಸಣೆಗೆ ಹಾಜರಾಗಬೇಕು.

ಸಿಇಟಿ ಅರ್ಜಿಯ ಪ್ರತಿ,ಪ್ರವೇಶ ಪತ್ರ,ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ,ವೈದ್ಯಕೀಯ ಪ್ರಮಾಣಪತ್ರ,ಶ್ರವಣದೋಷ ಸಮಸ್ಯೆ ಇರುವ ವಿದ್ಯಾರ್ಥಿಗಳು ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತರಬೇಕು.ವೈದ್ಯಕೀಯ ಸಮಿತಿ ನಿರ್ಧಾರವೇ ಅಂತಿಮ ಎಂದು ಅವರು ತಿಳಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ