ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೇವಾನ್ಯೂನ್ಯತೆ ಪರಿಗಣಿಸಿ ವಿಮಾ ಪರಿಹಾರ ನೀಡಲು ಆದೇಶ

ಶಿವಮೊಗ್ಗಅರ್ಜಿದಾರರಾದ ಶ್ರೀಮತಿ ಎಸ್. ಪ್ರೇಮ ಎಂಬುವವರು ಹೆಚ್.ಡಿ.ಎಫ್.ಸಿ.ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂ.ಲಿ.,ಮುಂಬೈ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಪರಿಹಾರ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ.
ಶ್ರೀಮತಿ ಎಸ್.ಪ್ರೇಮ ಎಂಬುವವರ ಪತಿಯು ಎಕ್ಸೈಡ್ ಲೈಫ್ ಸ್ಮಾರ್ಟ್ ಟರ್ಮ್ ಪ್ಲ್ಯಾನ್ ವಿಮಾ ಪಾಲಿಸಿಯನ್ನು ಪಡೆದಿದ್ದು,ವಾರ್ಷಿಕ ರೂ.12,752/- ನ ಕಂತು ಪಾವತಿಸಿರುತ್ತಾರೆ.ಈತ ದಿ: 19/07/2021 ರಂದು ಹೃದಯಸ್ಥಂಬನದಿಂದ ಮೃತಪಟ್ಟಿರುತ್ತಾರೆ. ಈ ಸಂಬಂಧ ಮೃತನ ಪತ್ನಿ ಹೆಚ್.ಡಿ.ಎಫ್.ಸಿ. ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂ.ಲಿ.,ಮುಂಬೈ ಇವರನ್ನು ಸಂಪರ್ಕಿಸಿ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಿ ಪಾಲಿಸಿಗನುಗುಣವಾಗಿ ವಿಮಾ ಪರಿಹಾರ ಮೊತ್ತ ಸಂದಾಯ ಮಾಡುವಂತೆ ಕೋರಿರುತ್ತಾರೆ ಆದರೆ ಕಂಪನಿಯವರು ಅರ್ಜಿದಾರರ ಪತಿಯು ಪಾಲಿಸಿಯನ್ನು ಪಡೆಯುವ ಪೂರ್ವದಲ್ಲಿ ಬೇರೆ ಪಾಲಿಸಿಗಳನ್ನು ಹೊಂದಿರುವ ವಿಚಾರವನ್ನು ಮರೆಮಾಚಿರುತ್ತಾರೆ. ಮತ್ತುಈ ಸಂಗತಿಯು ವಿಮಾ ಪಾಲಿಸಿಯ ನಿಬಂಧನೆಯ ಉಲ್ಲಂಘನೆಯಾಗಿರುವುದರಿಂದ ವಿಮಾ ಪರಿಹಾರ ಪಡೆಯಲು ಅರ್ಹರಾಗಿರುವುದಿಲ್ಲ ಎಂಬ ಕಾರಣ ನೀಡಿ ಪರಿಹಾರ ಮೊತ್ತ ನೀಡಲು ನಿರಾಕರಿಸಿರುತ್ತಾರೆ.
ಆಯೋಗವು ಪ್ರಕರಣದ ಅಂಶಗಳು, ಪಿರ್ಯಾದಿದಾರರು ಹಾರುಪಡಿಸಿದ ದಾಖಲೆಗಳು ಮತ್ತು ವಿಮಾ ಪಾಲಿಸಿಯ ಷರತ್ತು ಮತ್ತು ನಿಬಂಧನೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ವಿಮಾ ಕಂಪೆನಿಯು ಪರಿಹಾರವನ್ನು ಪಾವತಿಸದೆ ಸೇವಾ ನ್ಯೂನತೆಯನ್ನು ಎಸಗಿದ್ದಾರೆಂದು ನಿರ್ಣಯಿಸಿ, ವಿಮಾ ಕಂಪನಿಗೆ ನೋಟಿಸಿ ಜಾರಿ ಮಾಡಿದರೂ, ಆಯೋಗದ ಮುಂದೆ ಗೈರುಹಾಜರಾಗಿರುವುದರಿಂದ ಪ್ರಕರಣವನ್ನು ಏಕ-ಪಕ್ಷೀಯವೆಂದು ಪರಿಗಣಿಸಿ ಅರ್ಜಿದಾರರು ವಿಮಾ ಪರಿಹಾರವನ್ನು ಪಡೆಯಲು ಅರ್ಹರಾಗಿರುತ್ತಾರೆಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.
ಈ ಪ್ರಕಾರ ಎದುರುದಾರು ಅರ್ಜಿದಾರರಿಗೆ ಪಾಲಿಸಿಗೆ ಅನುಗುಣವಾಗಿ ಪಾಲಿಸಿ ಪರಿಹಾರ ಮೊತ್ತ ರೂ. 24.00 ಲಕ್ಷಗಳನ್ನು ಪಾವತಿಸುವುದು ಹಾಗೂ ತಮ್ಮ ಸೇವಾ ನ್ಯೂನತೆಯಿಂದಾಗಿ ಉಂಟಾದ ಮಾನಸಿಕ ಹಿಂಸೆ ಮತ್ತು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರ ಹಾಗೂ ರೂ.15000 ಗಳನ್ನು ಮತ್ತು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತಾಗಿ ರೂ.10,000/-ಗಳನ್ನು ಪಾವತಿಸಬೇಕೆಂದು ನಿರ್ದೇಶಿಸಿ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಸದಸ್ಯರಾದ ಶ್ರೀಮತಿ ಸವಿತಾ ಬಿ.ಪಟ್ಟಣಶೆಟ್ಟಿ, ಬಿ.ಡಿ.ಯೋಗಾನಂದ ಬಾಂಡ್ಯ ಇವರ ಪೀಠವು ಜೂನ್ 01 ರಂದು ಆದೇಶಿಸಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ