ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿಂಚಣಿ ವಿಳಂಬ ವಿಕಲಚೇತನ ಗೋಳು ಕೇಳುವವರು ಯಾರು?

ಹನೂರು:ವಿಕಲಚೇತನೋರ್ವನಿಗೆ ಪಿಂಚಣಿ ಹಣ ಬಾರದ ಹಿನ್ನಲೆ ಹಣ ಬರುವಂತೆ ಮಾಡಿಕೊಡಬೇಕು ನಾವು ತುಂಬಾ ಕಡು ಬಡತನದಿಂದ ಇದ್ದೇವೆ ಎಂದು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಭಾಸ್ಕರ್ ಡಿಸೋಜ ಕುಮಾರ್ ಪತ್ರಿಕಾ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ನಮ್ಮ ತಂದೆ ನಾನು ಚಿಕ್ಕವನಾಗಿದ್ದಾಗಲೇ ನಿಧನರಾಗಿದ್ದಾರೆ ನನ್ನ ತಾಯಿ ಕೂಲಿ ಮಾಡಿಕೊಂಡು ನನ್ನನ್ನು ಸಾಕುತ್ತಿದ್ದಾರೆ ಕಳೆದ ಏಳು ವರ್ಷಗಳ ಹಿಂದೆ ಬೈಕ್ ಅಪಘಾತದಲ್ಲಿ ಕಾಲುಮುರಿತವಾಗಿದ್ದು ಕಳೆದ ಐದು ವರ್ಷಗಳಿಂದ ಪಿಂಚಣಿ 1200 ರೂ.ಹಣ ಬರುತ್ತಿತ್ತು.ಒಂದು ವರ್ಷದಿಂದ ಯಾವುದೇ ರೀತಿಯ ಪಿಂಚಣಿ ಹಣವು ನನಗೆ ಬರುತ್ತಿಲ್ಲ ಹೀಗಾಗಿ ನನ್ನ ಜೀವನಕ್ಕೆ ಅನುಕೂಲವಾಗುವಂತೆ ಸರ್ಕಾರದ ಸವಲತ್ತುಗಳಲ್ಲಿ ಒಂದಾದ ಪಿಂಚಣಿ ಹಣವನ್ನು ಬರುವಂತೆ ಮಾಡಿಕೊಡಬೇಕು ಎಂದು ತಿಳಿಸಿದರು.

ಸರ್ಕಾರಿ ಪಿಂಚಣಿ ಹಣ ಬರುವಂತೆ ಮಾಡಿಕೊಡುವಂತೆ ಮನವಿ ಮಾಡುತ್ತಾ ನನಗೆ ವಿಕಲಚೇತನ ತಳ್ಳೋ ಗಾಡಿಯನ್ನು ದಯಮಾಡಿ ಕೊಡಿಸಿ ಕೊಡಿ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ರವರಿಗೆ ಮಾಧ್ಯಮ ಮುಖಾಂತರ ಮನವಿ ಮಾಡಿಕೊಂಡಿದ್ದಾರೆ.
ಹನೂರು ತಾಲೂಕು ತಹಶೀಲ್ದಾರ್ ಗುರುಪ್ರಸಾದ್ ಪ್ರತಿಕ್ರಿಯಿಸಿ,ಕಳೆದ ಒಂದು ವರ್ಷದಿಂದ ಇವರಿಗೆ ಪಿಂಚಣಿ ಹಣ ಬರುತ್ತಿಲ್ಲ ಎನ್ನುವುದು ನಮ್ಮ ಗಮನಕ್ಕೆ ಬಂದಿಲ್ಲ.ಇದೀಗ ಗಮನಕ್ಕೆ ಬಂದಿದ್ದು ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ಲೇ ಅವರನ್ನು ಸ್ಥಳಕ್ಕೆ ಕಳುಹಿಸಿ ಅವರಿಂದ ಮಾಹಿತಿ ಪಡೆದುಕೊಳ್ಳಲಾಗುವುದು ಬಳಿಕ ಪರಿಶೀಲಿಸಿ ಪಿಂಚಣಿ ಹಣವನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ