ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲೆಯು ಸಂಪತ್ಭರಿತಾ ಜಿಲ್ಲೆಯಾಗಿದ್ದು, ಸ್ವಉದ್ಯೋಗಕ್ಕೆ ಬಹಳ ಅವಕಾಶಗಳಿವೆ:ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್

ಶಿವಮೊಗ್ಗ ಜಿಲ್ಲೆಯು ಸಂಪತ್ಭರಿತಾ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು,ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.
ಅವರು ಜೂನ್ 10 ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲ ಶಿವಯೋಗಿ ಯೆಲಿ,ಉಪ ನಿರ್ದೇಶಕರು,ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಡೋಮೈನ್ ಸ್ಕೀಲ್ ಟ್ರೈನರ್ ಅದಂತಹ ಕತ್‍ಮುನಿಸಾ ಮತ್ತು ದೀಪಾರವರು ಹಾಜರಿದ್ದರು. ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸುವ ಜೊತೆಗೆ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಟ್ಟರು. ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ವರದಿ ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ