ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಮಾನವ ಹಕ್ಕು ಆಯೋಗದಿಂದ ನೋಟಿಸ್

ಬೆಂಗಳೂರು:ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗವು ವಿಕಲಚೇತನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಮತ್ತು ಸಾರಿಗೆ ಸಚಿವರು ಸೂಚನೆ ನೀಡಿದ್ದರೂ ಅದನ್ನು ಚಾಲನೆಗೊಳಿಸದೆ ನಿರ್ಲಕ್ಷ್ಯ ಧೋರಣೆ ವಹಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದೆ.

ಈ ಬಗ್ಗೆ ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ಮುಖ್ಯಮಂತ್ರಿ ಮತ್ತು ಸಾರಿಗೆ ಮಂತ್ರಿಗಳ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಯದರ್ಶಿಗಳು ವಿಕಲಚೇತನರಿಗೆ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಅನುಮತಿ ನೀಡಬಹುದಾಗಿದ್ದು ಮಾನ್ಯ ಸರಕಾರವು ಆದೇಶಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಿದ್ದರೂ ಸಹಾ ಈ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ದೂರು ನೀಡಿದ್ದರು.
ಈ ಬಗ್ಗೆ ಪರಿಶೀಲಿಸಿದ ರಾಜ್ಯ ಮಾನವ ಹಕ್ಕು ಆಯೋಗದ ಕಾರ್ಯನಿರತ ಆಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಅವರು ದೂರನ್ನು ಪರಿಗಣಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ