ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಬೀದರ ವಿಶ್ವವಿದ್ಯಾಲಯದಲ್ಲಿ ಸ್ನಾತಕ ಪದವಿಯ ಫಲಿತಾಂಶದ ಸಂಭ್ರಮ

ಬೀದರ್:ಕರ್ನಾಟಕದ ಕಿರೀಟ ಬೀದರ ಜಿಲ್ಲೆಗೆ ನೂತನ ಬೀದರ ವಿಶ್ವವಿದ್ಯಾಲಯವು ವರದಾನವಾಗಿ ದೊರೆತಿರುವುದು ಹೆಮ್ಮೆಯ ಸಂಗತಿ.ಕೇವಲ ಒಂದು ವರ್ಷದ ಪ್ರಾಯದಲ್ಲಿರುವ ವಿಶ್ವವಿದ್ಯಾಲಯದ ಆಡಳಿತ ಅತ್ಯಂತ ಕ್ರಿಯಾಶೀಲವಾಗಿ ಮುಂದುವರೆಯುತ್ತಿರುವುದು ಸಮಾಧಾನಕರ ಸಂಗತಿ. ಪಠ್ಯಕ್ರಮವು ವೇಳಾ ಪಟ್ಟಿಯಂತೆ ಸಮಯಕ್ಕೆ ತಕ್ಕಂತೆ ಬೋಧನೆ ಹಾಗೂ ನಿಗದಿತ ದಿನಾಂಕದಂದು ಪದವಿ ಪರೀಕ್ಷೆಗಳನ್ನು ನಡೆಸಿದ ಕೀರ್ತಿಗೆ ಪಾತ್ರವಾಗಿದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಎಂಬಂತೆ ಪ್ರಥಮ ಸೆಮೆಸ್ಟರ್ ಪದವಿಯ ಫಲಿತಾಂಶವು ಪ್ರಕಟಣೆಯಾಗುತ್ತಿರುವ ಸಂತೋಷದ ಘಳಿಗೆ ಬೀದರ ವಿಶ್ವವಿದ್ಯಾಲಯದ ಸ್ನಾತಕ ಪದವಿಯ ಫಲಿತಾಂಶವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಘೋಷಿಸಲಾಯಿತು.
ಪದವಿ ಪರೀಕ್ಷೆಯ ಫಲಿತಾಂಶ ಘೋಷಣೆಯ ಐತಿಹಾಸಿಕ ಸಂದರ್ಭದಲ್ಲಿ ನೂತನ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹಾಗೂ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀ ನಾಗಭೂಷಣ ಮಡೆಪ್ಪಾ ಕಮಠಾಣೆ, ಶ್ರೀ ಶಾಂತಲಿಂಗ ಸಾವಳಗಿ ಹಾಗೂ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ ಹಾಗೂ ಕುಲಸಚಿವರಾದ ಶ್ರೀ ಮಹ್ಮದ್ ಶಕೀಲ್‌ರವರು ಹಾಗೂ ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ಗಬಾಡಿಯವರು ಪಾಲ್ಗೊಂಡಿದ್ದರು.ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕ,ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಿಹಿ ಹಂಚಿ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ