ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೈಹಿಕ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಕೆ

ರಾಮದುರ್ಗ:ದೈಹಿಕ ಶಿಕ್ಷಕರ ಬೇಡಿಕೆಗಳು ಜುಲೈ ೨೦೨೪ ರ ಅಂತ್ಯದ ಒಳಗೆ ಈಡೇರದೆ ಇದ್ದಲ್ಲಿ ಪ್ರಸ್ತುತ ವರ್ಷದ ಇಲಾಖಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು ಆದ್ದರಿಂದ ಸರಕಾರ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೈಹಿಕ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಸಲಾಯಿತು.
ವೃಂದ ಮತ್ತು ನೇಮಕಾತಿಯನ್ನು ತಕ್ಷಣ ಈಡೇರಿಸಲು, ಮುಖ್ಯ ಶಿಕ್ಷಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ದೈಹಿಕ ಶಿಕ್ಷಕರಿಗೆ ನಿಡುವುದು,ದೈಹಿಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು ಇಲ್ಲದೇ ಇದ್ದ ಸಂದರ್ಭದಲ್ಲಿ ಅತಿಥಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡುವುದು,ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-೨ ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂಯೋಜಕರು/ಸಹಾಯಕ ದೈಹಿಕ ಶಿಕ್ಷಣ ಪರಿವೀಕ್ಷಕರು ಹುದ್ದೆ ಸೃಜಿಸಿ ಮುಂಬಡ್ತಿ ನೀಡುವುದು,ಎಸ್.ಎ.ಟಿ.ಎಸ್ ನಲ್ಲಿ ದೈಹಿಕ ಶಿಕ್ಷಣವನ್ನು ಭಾಗ ಎ ದಲ್ಲಿ ಸೇರ್ಪಡೆ ಮಾಡುವುದು,ದೈಹಿಕ ಶಿಕ್ಷಣ ಶಿಕ್ಷಕರಿಗೆ ಉನ್ನತ ವ್ಯಾಸಂಗ ಮಾಡಲು ವೇತನ ಸಹಿತ ಅನುಮತಿ ನೀಡುವುದು,ದೈಹಿಕ ಶಿಕ್ಷಣ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಪಿ.ಡಿ.ಕಾಲವಾಡ,ತಾಲೂಕಾಧ್ಯಕ್ಷ ಎನ್.ಜಿ.ಭಜಂತ್ರಿ, ಖಜಾಂಚಿ ಎಸ್.ಎಸ್.ಪಾಟೀಲ,ಎಸ್.ಎಚ್. ಬಂಡಿವಡ್ಡರ,ಪಿ.ಬಿ.ಲಮಾಣಿ,ಎಸ್.ಐ.ಸತ್ತಿಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ:ಕರಿಯಪ್ಪ ಮಾ ಮಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ