ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳು ಚೆನ್ನಾಗಿ ಓದಿ ಮುಂದೆ ಬರಬೇಕು:ಚೆನ್ನಯ್ಯ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿಗಳಾದ ಚೆನ್ನಯ್ಯ ರವರಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಬರೆಯುವ ಪುಸ್ತಕಗಳು,ಪರಿಕರ ವಿತರಣೆ ಮಾಡಲಾಯಿತು.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಪುಸ್ತಕಗಳನ್ನು ಸುಂದರವಾದ ಸಮಾರಂಭದಲ್ಲಿ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಡಾ.ಸಂಪತ್,ಕೆಂಪೇಗೌಡ ಹಾಸ್ಪಿಟಲ್ ಬೆಂಗಳೂರು ಇವರು ಮಕ್ಕಳಿಗೆ ಆರೋಗ್ಯದ ವಿಚಾರವಾಗಿ ಹಿತವಚನ ನುಡಿದರು ಮಕ್ಕಳು ಹೇಗೆ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ತಿಳಿಸಿದರು ಹಾಗೂ ಪುಸ್ತಕ ದಾನಿಗಳು ಚೆನ್ನಯ್ಯ ಇವರು ಎಲ್ಐಸಿ ವ್ಯವಸ್ಥಾಪಕರು ಅವರು ಮಾತನಾಡಿ ನಾನು ಇದೇ ಶಾಲೆಯಲ್ಲಿ 50 ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿರುತ್ತೇನೆ ಹಾಗಾಗಿ ಇದೇ ಶಾಲಾ ಮಕ್ಕಳಿಗೆ ನಮ್ಮ ಕಡೆಯಿಂದ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ನುಡಿದರು ಹಾಗೂ ಮಕ್ಕಳು ಚೆನ್ನಾಗಿ ಓದಿ ಮುಂದೆ ಬರಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪುಸ್ತಕ ದಾನಿಗಳಾದ ಚೆನ್ನಯ್ಯರವರಿಗೆ ಶಾಲಾವತಿಯಿಂದ ಹಾಗೂ ಕರ್ನಾಟಕ ರಕ್ಷಣಾ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ಕೊಡಲಾಯಿತು ಹಾಗೂ ಡಾಕ್ಟರ್ ಸಂಪತ್ತು ಕೆಂಪೇಗೌಡ ಹಾಸ್ಪಿಟಲ್ ಬೆಂಗಳೂರು ಇವರನ್ನು ಸಹ ಸನ್ಮಾನಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕರವೇ ಫ್ರಾನ್ಸಿಸ್ ಡಿಸೋಜರವರು ರವರು ಹಾಗೂ ಬರೆಯುವ ಪುಸ್ತಕ ಹಾಗೂ ಪರಿಕರಗಳನ್ನು ವಿತರಣೆ ಮಾಡಿದ ದಾನಿಗಳಾದ ಚೆನ್ನಯ್ಯನವರು ಎಲ್ಐಸಿ ವ್ಯವಸ್ಥಾಪಕರು ಹಾಗೂ ಡಾ ಸಂಪತ್ ರವರು ಕೆಂಪೇಗೌಡ ಹಾಸ್ಪಿಟಲ್,ಬೆಂಗಳೂರು ಹಾಗೂ ಗಣಪತಿ ರವರು ನಂದಿಗುಂದ ಶಾಲೆಯ ಹೆಡ್ ಮಾಸ್ಟರ್ ಹಾಗೂ ಶಾಲಾ ಸಿಬ್ಬಂದಿಗಳು ಹಾಗೂ ಅಂಗನವಾಡಿ ಟೀಚರ್ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ