ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಶರಣು ಮೋದಿ ಅವರನ್ನು ಆಯ್ಕೆ ಮಾಡಲು ಮನವಿ

ಕಲಬುರಗಿ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ,ಪಾಲಿಕೆಯ ಮಾಜಿ ಮೇಯರ ಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
ಶರಣು ಮೋದಿ ಅವರು ವಿಧಾನಸಭೆ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ ಮತಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದಾರೆ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಟಿಕೆಟನಿಂದ ವಂಚಿತರಾಗಿದ್ದ ಅವರು, ನಿಷ್ಠಾವಂತ ಕಾರ್ಯಕರ್ತರಾಗಿ,ಕಲಬುರಗಿ ಜಿಲ್ಲೆಯಲ್ಲಿ ಸಾಕಷ್ಟು ಬಾರಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.
ಶರಣು ಮೋದಿ ಅವರು ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು, ದಕ್ಷಿಣ ಮತಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಟಿಕೆಟ ಕೈ ತಪ್ಪಿದರು ಕೂಡಾ ಇಡೀ ಕಲಬುರಗಿ ಜಿಲ್ಲೆಯ ಜನತೆಯ ಪರವಾಗಿ ಕೆಲಸ ಅಭಿವೃದ್ದಿಗಳಿಗೆ ಸಹಕರಿಸುತ್ತಿದ್ದಾರೆ.ಕಳೆದ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ.
ಅವರು ಜಿಲ್ಲಾಧ್ಯಕ್ಷರಾದರೆ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ.ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ, ಪ್ರಾಮಾಣಿಕವಾಗಿ ಕೆಲಸವಾಗಿ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆಪಟ್ಟಿರುವುದಿಲ್ಲ. ಸಕ್ರೀಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬಂದಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.ಕೂಡಲೇ ಕಾಂಗ್ರೆಸ್ ಹೈಕಮಾಂಡವು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶರಣು ಮೋದಿ ಅವರನ್ನು ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಅವರು ಮನವಿ ಮಾಡಿಕೊಂಡರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ