ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಳದಲ್ಲಿ ಬಿದ್ದಿದ್ದ ಎಮ್ಮೆಯನ್ನು ಕಾಪಾಡಿದ ಅಗ್ನಿಶಾಮಕ ಸಿಬ್ಬಂದಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಪವಾಡೆಪ್ಪ ಶಂಕರಗೌಡ ಪಾಟೀಲರವರ ಎಮ್ಮೆಯು ಅಂದಾಜು 30×30 ಅಡಿ ವಿಸ್ತಾರವಾದ 40 ರಿಂದ 45 ಅಡಿ ಆಳದ ಅದರಲ್ಲಿ 05 ಅಡಿ ಆಳದ ತೇರೆದ ನೀರಿರುವ ಭಾವಿ ಆಕಸ್ಮಿಕವಾಗಿ ಕಾಲು ಜಾರಿ ಎಮ್ಮೆ ಬಿದ್ದಿದ್ದು,ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಅಥಣಿ ಅಗ್ನಿಶಾಮಕ ಠಾಣೆ ದೂರವಾಣಿ ಕರೆ ಮಾಡಿ ತಿಳಿಸಿದರು, ಕರೆ ಬಂದ ತಕ್ಷಣ ಜಲವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 40 ರಿಂದ 45 ಅಡಿ ಆಳದ ಅದರಲ್ಲಿ 05 ಅಡಿ ಬಾವಿಯಲ್ಲಿ ಹೊಸ ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು ಒಂದು ಘಂಟೆ ಐದು ನಿಮಿಷಗಳ ಕಾಲ ಶ್ರಮವಹಿಸಿ ಸಿಬ್ಬಂದಿಯವರುಗಳು ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ ಎಮ್ಮೆಯನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ಗುಂಡೇವಾಡಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ಎಮ್ಮೆಯ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.
ಅಗ್ನಿಶಾಮಕ ತಂಡದಲ್ಲಿ ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿರವರಾದ ಮಲ್ಲಿಕಾರ್ಜುನ ಬಂದಾಳ ರವರ ನೇತ್ರತ್ವದಲ್ಲಿ ಅನಿಲ ಬಡಚಿ,
ಮಲ್ಲನಗೌಡ ನಾಯ್ಕ,ಸಂಜೀವ್ ಚೌಗಲಾ ಕಲ್ಮೇಶ್ ಚಿಮ್ಮಡ,ಸಂತೋಷ್ ಚೌಗಲಾ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ