ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೋಣಿಕೊಪ್ಪ ಠಾಣಾಧಿಕಾರಿ ರೂಪಾ ದೇವಿಯವರಿಗೆ ಸನ್ಮಾನ

ಕೊಡಗು ಜಿಲ್ಲಾ ಸಾರ್ವಜನಿಕರ ಹಿತರಕ್ಷಣಾ ಸಮಿತಿ ವತಿಯಿಂದ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬಿರಾದಾರ್ ಅವರನ್ನು ಗೌರವಿಸಲಾಯಿತು.
ಅರುವತೊಕ್ಕು ಗ್ರಾ.ಪಂ ಎದುರು ನಡೆದ ಪಿಕಪ್ ಮತ್ತು ಸ್ಕೂಟರ್ ಅಪಘಾತದಲ್ಲಿ ಗೋಣಿಕೊಪ್ಪ ಗ್ರಾಪಂ ಮಾಜಿ ಸದಸ್ಯೆ ಮತ್ತು ಸಂತ ಥೋಮಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಲು ಕಾರಣನಾದ ನೇಪಾಳ ಮೂಲದ ಪಿಕಪ್ ಚಾಲಕ ಕಮಲ್ ಸಿಂಗ್‌ ಎಂಬಾತನನ್ನು ಶ್ರೀಮಂಗಲದಲ್ಲಿ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಬಂಧಿಸಲು ಕಾರಣರಾಗಿರುವುದನ್ನು ಶ್ಲಾಘಿಸಿ ಗೋಣಿಕೊಪ್ಪ ಠಾಣಾಧಿಕಾರಿ ಕಛೇರಿಯಲ್ಲಿ ಅಭಿನಂದಿಸಲಾಯಿತು.
“ಗೋಣಿಕೊಪ್ಪಕ್ಕೆ ರೂಪಾದೇವಿ ಅವರು ಠಾಣಾಧಿಕಾರಿಯಾಗಿ ಬಂದ ನಂತರ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಹುತೇಕವಾಗಿ ನಿಯಂತ್ರಿಸಲಾಗಿದೆ.
ಕೊಡಗು ಜಿಲ್ಲಾ ಸಾರ್ವಜನಿಕರ ಹಿತರಕ್ಷಣಾ ಸಮಿತಿ ವತಿಯಿಂದ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬಿರಾದಾರ್ ಅವರನ್ನು ಅಭಿನಂದಿಸಲಾಯಿತು.
ಜತೆಗೆ ಹಲವಾರು ಪ್ರಕರಣಗಳನ್ನು ಶೀಘ್ರದಲ್ಲಿ ಭೇದಿಸಿ ನೊಂದವರಿಗೆ ನ್ಯಾಯ ಕೊಡಲು ಶ್ರಮಿಸುತ್ತಿದ್ದಾರೆ. ಹೆಣ್ಣು ಮಗಳ ಈ ಬಿಡುವಿಲ್ಲದ ಸಮಯದ ಮತ್ತು ಒತ್ತಡದ ಕರ್ತವ್ಯ ನಿಷ್ಠೆ ಪ್ರತಿಯೊಬ್ಬ ಹೆಣ್ಣುಮಗಳಿಗೂ
ಮಾದರಿಯಾಗಬೇಕು,”ಎಂದು ಸಮಿತಿ ಅಧ್ಯಕ್ಷ ಅಜ್ಜಾಮಾಡ ಕಟ್ಟಿಮಂದಯ್ಯ ಹೇಳಿದರು.
ಸತೀಶ್ ದೇವಯ್ಯ,ಕಾಶಿಕಾರ್ಯಪ್ಪ ಸಿ ಎನ್ ವಿಶ್ವನಾಥ್,ಮಾದಯ್ಯ ಸುಬ್ರಮಣಿ ಇತರರು ಇದ್ದರು.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ