ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜು.1ರಿಂದ ಗ್ರಾಪಂಗಳಲ್ಲೇ ಜನನ,ಮರಣ ನೋಂದಣಿ

30 ದಿನದಲ್ಲೇ ಪ್ರಮಾಣ ಪತ್ರ ನೀಡಲು ಅಧಿಕಾರ

ಜೇವರ್ಗಿ:ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಿ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆ ಅನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದವರೆಗಿನ ಪ್ರಕರಣಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ.
ಜನನ-ಮರಣ ನಡೆದ 21 ದಿನಗಳ ಒಳಗಾಗಿ ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣಪತ್ರ ವಿತರಿಸಬೇಕು. 21 ದಿನಗಳಿಂದ 30 ದಿನಗಳ ನಡುವೆ ನೋಂದಣಿ ಮಾಡಿದರೆ 2 ರೂ. ವಿಳಂಬ ಶುಲ್ಕ,30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ 5 ರೂ ಶುಲ್ಕ ಪಡೆದು ನೋಂದಣಿ ಮಾಡಬಹುದು.
ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳ ಪ್ರಕಾರ 1 ವರ್ಷದ ಬಳಿಕ ನೋಂದಣಿ ಮಾಡಿದರೆ ಪ್ರಥರ್ಮ ದರ್ಜೆ ದಂಡಾಧಿಕಾರಿ ಅವರ ಆದೇಶದ ಜತೆಗೆ 10 ರೂ ವಿಳಂಬ ಶುಲ್ಕ ಪಡೆದು ನೊಂದಣಿ ಮಾಡಬೇಕು.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ