ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಬ್ಬೆದ್ದು ನಾರುತ್ತಿರುವ ಹೆದ್ದಾರಿ

ಚಾಮರಾಜನಗರ ಮತ್ತು ಗುಂಡ್ಲುಪೇಟೆ ರಸ್ತೆ ರಾಜ್ಯ ಹೆದ್ದಾರಿಯಾಗಿದ್ದು ಗಬ್ಬೆದ್ದು ನಾರುತ್ತಿದೆ.
ಈ ರಸ್ತೆ ಚಾಮರಾಜನಗರ ಜಿಲ್ಲೆ ಕೇಂದ್ರ ರಸ್ತೆಯಾಗಿದೆ ಇದು ತಾಲೂಕಿನ ವಿವಿಧ ಗ್ರಾಮಗಳ ಜನತೆ ದಿನನಿತ್ಯ ತಿರುಗಾಡುವ ರಸ್ತೆ ಇದರ ಪಕ್ಕದಲ್ಲೇ ಜೆಡಿಎಸ್ ಕಚೇರಿ ಹಾಗೂ ಶಾಲೆ ಕಾಲೇಜಗಳಿದ್ದು ದಿನ ನಿತ್ಯ ವಿದ್ಯಾರ್ಥಿಗಳು,ಸಾರ್ವಜನಿಕರು ಓಡಾಡುತ್ತಿರುತ್ತಾರೆ. ಇದರ ಪಕ್ಕದಲ್ಲೇ ಯುಜಿಡಿ ಓಪನ್ ಆಗಿದ್ದು ಪಾಯಿಂಟ್ ಗುರುತಿಸಲು ಆಗದೆ ಜೆಸಿಬಿಯಲ್ಲಿ ಏಳೆಂಟು ಮೀಟರ್ ನಷ್ಟು ಮುಖ್ಯ ರಸ್ತೆಯನ್ನು ಅಗೆದು ಅಧ್ವಾನ ಮಾಡಿ ಹೋಗಿದ್ದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ.
ಮನೆಗಳ ಮಲಿನ ನೀರು ಪ್ರಮುಖ ರಸ್ತೆಗಳ ಬದಿಯಲ್ಲಿ ನಿಂತಿದೆ.ಇದರಿಂದ ಅಂಗಡಿ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೂ ತೊಡಕಾಗಿದೆ. ಸಂಜೆಯಾದರೆ ಸೊಳ್ಳೆ ಕಾಟ ಕೂಡಾ ಗ್ರಾಹಕರು ಅಂಗಡಿಗಳಿಗೆ ಹೋಗಲು ಚರಂಡಿ ದಾಟಿಕೊಂಡೇ ಹೋಗಬೇಕಾದ ಸ್ಥಿತಿ ಇದೆ.ಇಲ್ಲಿ ನಿಂತ ನೀರೆಲ್ಲಾ ಕೊಳೆತು ನಾರುತ್ತಿದೆ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡಬೇಕು ಅಂಗಡಿ ಮುಂಗಟ್ಟುಗಳು ಇವೆ ಹಾಗಾಗಿ ಯುಜಿಡಿ ನೀರು ಸರಾಗವಾಗಿ ಹರಿಯದ ಕಾರಣ ನಿಂತಲ್ಲೇ ನಿಂತಿದೆ. ಇದರಿಂದ ಕೊಳೆತ ವಾಸನೆ ರಸ್ತೆಯಲ್ಲಿ ರಾಚುತ್ತಿದೆ ತಾಲೂಕು ಕೇಂದ್ರವಾದರೂ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ ಚರಂಡಿಯಲ್ಲಿ ಹೂಳು ತುಂಬಿಕೊಂಡಿದೆ ಎಂದು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಈ ವಿಷಯಕ್ಕೆ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಬಂದು ನೋಡುತ್ತಾರೆ ಮತ್ತು ಪುರಸಭೆ ಮುಖ್ಯಾಧಿಕಾರಿ ಗಮನಕ್ಕೂ ತಂದರೂ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಶ್ರೀಘವಾಗಿ ಈ ಸಮಸ್ಯೆಯನ್ನು ಬಗೆಹರಿಸಿ ಕೊಡಬೇಕು ಇಲ್ಲದಿದ್ದರೆ ಈ ಸಮಸ್ಯೆ ಸರಿಯಾಗವರೆಗೂ ಸಂಪೂರ್ಣವಾಗಿ ರಸ್ತೆಯನ್ನೇ ಬಂದ್ ಮಾಡಲಾಗುವುದು ಎಂದು ಜೆಡಿಎಸ್ ಪಕ್ಷದ ಮುಖಂಡ ಕುರುಬೂರು ಮಂಜುನಾಥ್ ತಿಳಿಸಿದ್ದಾರೆ.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ