ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ.ಮಂಜಪ್ಪ ಇವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಕೊಟ್ಟೂರು:ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಜುಲೈ 5- 6, 2024 ರಂದು ಫೋಟೋ ಟುಡೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ನಡೆಯಲಿದೆ ಎಂದು ಕೊಟ್ಟೂರು ತಾಲೂಕು ಛಾಯಾಗ್ರಾಹಕರ ಘಟಕದ ಪದಾಧಿಕಾರಿಗಳು ತಿಳಿಸಿದರು.
ಕರ್ನಾಟಕ ವೀಡಿಯೋ ಮತ್ತು ಫೋಟೋ ಅಸೊಶಿಯೇಶನ್ ಮತ್ತು ಬೈಸೆಲ್ ಇಂಟ್ರಾಕ್ಷನ್ ಪ್ರೈ.ಲಿ ಅವರ ಸಹಯೋಗದೊಂದಿಗೆ ನಡೆಯಲಿರುವ ಅಂತರ್ರಾಷ್ಟ್ರೀಯ ಮಟ್ಟದ ವಸ್ತು ಪ್ರದರ್ಶನದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನೂರಾರು ಕಂಪನಿಗಳು ಭಾಗವಹಿಸಲಿವೆ ಉಚಿತ ಕ್ಯಾಮರಾ ಸರ್ವೀಸ್ ಹಾಗೂ ಛಾಯಾಗ್ರಾಹಕರಿಗೆ ಉಪಯುಕ್ತ ಕಾರ್ಯಾಗಾರಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಈ ಕಾರ್ಯಕ್ರದಲ್ಲಿ ನಾಡಿನಾದ್ಯಂತ ಸಾವಿರಾರು ಛಾಯಾಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂಧರ್ಭದಲ್ಲಿ ವಿಜಯನಗರ ಜಿಲ್ಲೆ,ಕೊಟ್ಟೂರು ಪಟ್ಟಣದ ಹಿರಿಯ ಛಾಯಾಗ್ರಾಹಕರಾದ ಬಿ.ಮಂಜಪ್ಪ ಇವರಿಗೆ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕಾರ್ಯಕ್ರಮ ಸಂದರ್ಭದಲ್ಲಿ ಕರ್ನಾಟಕ ಛಾಯಾ ರತ್ನ ಪಶಸ್ತಿ ಪ್ರಧಾನ ಮಾಡಲಾಗುವುದು ನಾಡಿನ ಛಾಯಾಗ್ರಹಣ ಕ್ಷೇತ್ರಕ್ಕೆ ದುಡಿದ ಶ್ರೇಷ್ಠ ಛಾಯಾಗ್ರಾಹಕರಿಗೆ ನೀಡುವ ಗೌರವ ಪ್ರಶಸ್ತಿ ಇದಾಗಿದೆ.ವಿಜಯನಗರ ಜಿಲ್ಲೆ, ಕೊಟ್ಟೂರು ಪಟ್ಟಣದ ಛಾಯಾಗ್ರಾಹಕನ್ನು ಗುರುತಿಸಿ ಪ್ರಶಸ್ತಿ ನೀಡಿದ
ಕರ್ನಾಟಕ ವೀಡಿಯೋ ಮತ್ತು ಫೋಟೋ ಅಸೊಶಿಯೇಶನ್ ಅವರಿಗೆ ಕೊಟ್ಟೂರು ತಾಲೂಕು ವೀಡಿಯೋ ಮತ್ತು ಫೋಟೋ ಅಸೋಶಿಯೇಶನ್ ತಾಲೂಕು ಘಟಕದ ಪದಾಧಿಕಾರಿಗಳು ಅಭಿನಂದನೆಗಳು ತಿಳಿಸಿ ಪ್ರಶಸ್ತಿಗೆ ಭಾಜನರಾದ ಬಿ.ಮಂಜಪ್ಪ ಇವರಿಗೆ ಕೊಟ್ಟೂರು ಪಟ್ಟಣದ ಛಾಯಗ್ರಾಹಕರು ಸ್ನೇಹಿತರು, ಕುಟುಂಬ ವರ್ಗ, ಮುಂತಾದವರು ಶುಭಾಶಯಗಳನ್ನು ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ