ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅನಧಿಕೃತವಾಗಿ ಶೆಡ್ ಅನ್ನು ತೆರವುಗೊಳಿಸಲು ಮನವಿ

ಚಾಮರಾಜನಗರ ಜಿಲ್ಲೆಯ
ಹನೂರು ತಾಲ್ಲೂಕಿನ ಕೌದಳ್ಳಿ-ಲಕ್ಷಮಣಯ್ಯನದೊಡ್ಡಿ ಸಮೀಪ ಸರ್ವೇ ನಂಬರ್ ೯೩೭ರಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಹೀಗಾಗಿ ಅನಧಿಕೃತವಾಗಿ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ಚಾಮರಾಜನಗರ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಮುಖಂಡರು ಮನವಿ ಮಾಡಿದರು.
ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆ ವಸತಿ ಗೃಹ ಮುಂಭಾಗ ಸೇರಿದ ಚಿಕ್ಕಲತ್ತೂರು ಗ್ರಾಮದ ಜನರು ಮಾತನಾಡಿ, ಲಕ್ಷಮಣಯ್ಯನ ದೊಡ್ಡಿಯ ಜನರು ಜಮೀನಿನಲ್ಲಿ ೫೦ಕ್ಕೂ ಹೆಚ್ಚು ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಇದರಿಂದ ಜಮೀನು ಮಾಲೀಕರಿಗೆ ಅನ್ಯಾಯವಾಗುತ್ತಿದೆ.ಈ ಬಗ್ಗೆ ಅಧಿಕಾರಿಗಳು ಭೇಟಿ ನೀಡಿ ನ್ಯಾಯ ಒದಗಿಸಬೇಕು ಎಂದು ತಹಶೀಲ್ಧಾರ್ ಗುರುಪ್ರಸಾದ್ ಅವರಿಗೆ ಮೌಖಿಕ ಮನವಿ ಮಾಡಿದರು.
ಬಳಿಕ ತಹಶೀಲ್ಧಾರ್ ವೈ.ಕೆ.ಗುರುಪ್ರಸಾದ್ ಮಾತನಾಡಿ, ಕೌದಳ್ಳಿಯ-ಲಕ್ಷಮಣಯ್ಯದೊಡ್ಡಿ ಜಮೀನಿನಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿದೆ. ನಿಮ್ಮಗಳ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕು ತರಲಾಗಿದ್ದು ಉಪವಿಭಾಗಾಧಿಕಾರಿ ಜೊತೆ ಚರ್ಚೆ ಮಾಡಲಾಗಿದೆ ನಾಳೆ ಸರ್ವೇ ಕಾರ್ಯವಾಗಲಿದೆ. ಬಳಿಕ ಮುಂದಿನ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಚಾಮರಾಜನಗರ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಮಾದೇಶ್, ಕಾರ್ಯಧ್ಯಕ್ಷ ಶ್ರೀನಿವಾಸ್, ಕೌದಳ್ಳಿ ಗ್ರಾಮಪಂ ಸದಸ್ಯ ಚಿಕ್ಕಲತ್ತೂರು ಶಿವಕುಮಾರ್, ಮುಖಂಡರಾದ ಆರ್.ಮುನಿಯಪ್ಪ, ನೀಲಪ್ಪ, ಗೋವಿಂದ, ಯಜಮಾನ್ ಸಿದ್ದ ಮತ್ತಿತರರು ಇದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ