ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡೆಂಗ್ಯೂ ನಿಯಂತ್ರಣಕ್ಕೆ ಮರತೂರಕರ್ ಒತ್ತಾಯ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ ಸೇರಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪ್ರತಿ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ ರೋಗಗಳು ಜನತೆಯನ್ನು ಭಾದಿಸುವುದು ಸರ್ವೆ ಸಾಮಾನ್ಯ.ಈ ಬಾರಿ ಮಳೆ ಬೀಳುತ್ತಿದಂತೆ ಡೆಂಗ್ಯೂ ಹಾವಳಿ ಹೆಚ್ಚಾಗಿದೆ.ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಜಿಲ್ಲಾಡಳಿತ ಮಳಗಾಲ ಎದುರಿಸಲು ಮತ್ತು ಆರೋಗ್ಯ ಸುರಕ್ಷಾ ಕ್ರಮಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಡೆಂಗ್ಯೂಗಳಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಕೈಗೊಳ್ಳುವ ಬಗ್ಗೆ ಮತ್ತು ರೋಗ ತಡೆಗಟ್ಟಲು ಅಗತ್ಯ ಕ್ರಮಗಳ ಬಗ್ಗೆ ಜನತೆಗೆ ಮುನ್ನೆಚ್ಚರಿಕೆ ಕ್ರಮ ತಿಳಿಸಬೇಕಿತ್ತು. ನೀರು ನಿಲ್ಲುವ ರಸ್ತೆ, ತಗ್ಗು ಪ್ರದೇಶಗಳಲ್ಲಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.
ಸರಕಾರ ಡೆಂಗ್ಯೂ ಪರೀಕ್ಷೆ ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಪರೀಕ್ಷಾ ದರಗಳನ್ನು ನಿಗದಿಗೊಳಿಸಿದೆ‌.ಆದರೆ ಡೆಂಗೆ ಪತ್ತೆಯಾದ ರೋಗಿಗಳಿಗೆ ಆಸ್ಪತ್ರೆಯ ಚಿಕಿತ್ಸೆಯ ದರ ಮತ್ತು ವೈದ್ಯರು ವಿಧಿಸುವ ಶುಲ್ಕದ ಬಗ್ಗೆ ಪ್ರಸ್ತಾಪಗಳಿಲ್ಲ. ಖಾಸಗಿ ಆಸ್ಪತ್ರೆಗಳು ರೋಗದ ಹೆಸರಲ್ಲಿ ನಿಗದಿತ ದರಗಳಿಗಿಂತಲೂ ಹೆಚ್ಚಿನ ಲೂಟಿ ನಡಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ