ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ ಬಾದಾಮಿ ಮಂಡಲ ವತಿಯಿಂದ ಪ್ರತಿಭಟನೆ

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕ ಪಟ್ಟಣದ ಪುರಸಭೆ ಎದುರು ದಿನಾಂಕ 8.7.2024 ರಂದು ಸೋಮುವಾರ ಅಂಬೇಡ್ಕರ್,ಭಾರತಾಂಬೆಯ, ಮಹಾತ್ಮಾ ಗಾಂಧೀಜಿ ಅವರ ಭಾವ ಚಿತ್ರ ಇಟ್ಟು ಭಾರತೀಯ ಜನತಾ ಪಾರ್ಟಿಯ ಬಾದಾಮಿ ಮಂಡಲ ವತಿಯಿಂದ ಕ್ಯಾರೇ ಅನ್ನದ ಪುರಸಭೆ ಮುಖ್ಯಾಧಿಕಾರಿ ಬಂದೇನವಾಜ ಡಾoಗೆ ವಿರುದ್ಧ ಪ್ರತಿಭಟನೆ ನಡೆಸಿದರು.ಬರಿ ಅರ್ಜಿ ಕೊಡುವುದಾಗಿದೆ ಯಾವುದೇ ಪರಿಹಾರ ಇಲ್ಲಾ ಬಾದಾಮಿ ಹೋರಾಟಗಾರರು ಜನರು ಹಾಗೂ ಬಿ ಜೆ ಪಿ ಪಕ್ಷದ ಸದಸ್ಯರುಗಳು ಸೇರಿ ಪ್ರತಿಭಟನೆ ಕೈಗೊಂಡಿದ್ದರು. ನಂತರ ಸ್ಥಳಕ್ಕೆ ಬಾದಾಮಿ ಪಿ ಎಸ್ ಐ ವಿಠ್ಠಲ್ ನಾಯಿಕ್ ಆಗಮಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದಾರೆ. ಮುಖ್ಯಾಧಿಕಾರಿ ಕಾಂಗ್ರೆಸ್ ಪರ ಕೆಲಸ ಮಾಡುತ್ತಾ ಇದ್ದಾರೆ ಎಂದು ಘೋಷಣೆ ಕೂಗುತ್ತಾ ತಮ್ಮ ನೋವನ್ನು ವ್ಯಕ್ತ ಪಡಿಸಿದ್ದಾರೆ.ನಂತರ ಶುಕ್ರವಾರ ತನಕ ಸಮಯ ಗಡುವು ತೆಗೆದುಕೊಂಡಿದ್ದಾರೆ. ಪುರಸಭೆ ಅಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.ಹಾಗಾದರೆ ಕಾದು ನೋಡಬೇಕಾಗಿದೆ ಸಮಸ್ಯೆಗೆ ಪರಿಹಾರ ಸಿಗುತ್ತಾ ಅಥವಾ ಇಲ್ವಾ.ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಸ್ಥಳೀಯ ಸಾರ್ವಜನಿಕರು, ಮಹಿಳೆಯರು ಹಾಗೂ ಪೊಲೀಸ್ ಇಲಾಖೆ ಉಪಸ್ಥಿತರಿದ್ದರು.

ವರದಿ:ಪರಶುರಾಮ್ ಬಂಡಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ