ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾಡಳಿತದ ಕಾಳಜಿಯಿಂದ ಹೊಸ ಬದುಕಿಗೆ ಕಾಲಿಟ್ಟ ಮಾನಸಿಕ ಅಸ್ವಸ್ಥೆ

ಕೂದಲು ಕತ್ತರಿಸಿ, ಸ್ನಾನ ಮಾಡಿಸಿ ಒಳ್ಳೆಯ ಬಟ್ಟೆಯನ್ನು ತೊಡಿಸಿ ಹೊಸ ಬದುಕಿಗೆ ಕಾಲಿಡುವಂತೆ ಮಾಡಿದ ಭಾರತಾಂಬೆ ಶಿಕ್ಷಣ ಸಂಸ್ಥೆ

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಮಳೆ ಚಳಿ ಎನ್ನದೇ ಅರೆ ಹುಚ್ಚರಂತೆ ನಗರದಲ್ಲಿ ಅಲೆಯುತ್ತಿದ್ದ ನಿರ್ಗತಿಕ ಮಾನಸಿಕ ಅಸ್ವಸ್ಥೆ ಮಹಿಳೆಯು ಜಿಲ್ಲಾಡಳಿತದ ಕಾಳಜಿಯಿಂದ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ.

ನಿರ್ಗತಿಕ ಮಹಿಳೆಯು ಗುರುಮಿಠಕಲ್ ನಗರದಲ್ಲಿ ಬೀದಿ ಬದಿಯಲ್ಲಿ ಅಲೆಯುತ್ತಿರುವುದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಹಾರೈಕೆ ಕೇಂದ್ರಕ್ಕೆ ಸೇರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುಮಿಠಕಲ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಮೇಲ್ವಿಚಾರಕಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳು ಆ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ನಗರದಲ್ಲಿನ ವಸತಿ ರಹಿತರ ಆಶ್ರಯ ಕೇಂದ್ರದ ಅಧೀನಕ್ಕೆ ಒಪ್ಪಿಸಿದರು.

ಆಕೆಯ ಹೆಸರು ಸುರತಿಕ ತಂದೆ ಶ್ರೀರಾಮ್, ತಾಯಿ ರುಕ್ಮನಿಭಾಯಿ ಎಂದು ಹೇಳುತ್ತಿದ್ದಾಳೆ. ದಯನೀಯ ಸ್ಥಿತಿಯಲ್ಲಿ ಖಿನ್ನತೆಗೆ ಒಳಗಾದಂತೆ ಇರುವ ಮಹಿಳೆಯ ಮಾಸಿದ ಹರಕಲು ಬಟ್ಟೆ, ಗಂಟು ಕಟ್ಟಿದ ತಲೆ ಕೂದಲು ನೋಡಿದರೆ ಆಕೆಯನ್ನು ಮುಟ್ಟದ ಸ್ಥಿತಿಯಲ್ಲಿ ಇದ್ದರು. ವಸತಿ ರಹಿತರ ಆಶ್ರಯ ಕೇಂದ್ರವನ್ನು ನಿರ್ವಹಣೆ ಮಾಡುತ್ತಿರುವ ಭಾರತಾಂತೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ದೊಡ್ಡಮನಿ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಆಕೆಯ ತಲೆ ಕೂದಲು ಕತ್ತರಿಸಿ, ಸ್ನಾನ ಮಾಡಿಸಿ ಒಳ್ಳೆಯ ಬಟ್ಟೆಯನ್ನು ತೊಡಿಸಿದ್ದಾರೆ.ಸಾಮಾನ್ಯ ಜನರಂತೆ ಹೊಸ ಬದುಕಿಗೆ ಕಾಲಿಡುವಂತೆ ಮಾಡಿದ್ದಾರೆ.

ಮುಗ್ದ ಮನಸಿನ ಸುರತಿಕಗೆ ಆರೈಕೆಯಿಲ್ಲದೆ ಬೀದಿ ಬೀದಿಗಳಲ್ಲಿ ಅಲೆಯುತ್ತಿದ್ದಳು. ಈಕೆಯು ಮಾನಸಿಕ ಅಸ್ವಸ್ಥತೆ ಮಾತ್ರವಲ್ಲದೆ ದೈಹಿಕವಾಗಿ ನಾನಾ ಕಾಯಿಲೆಗಳಿಂದಲೂ ಪರದಾಡಿ ಯಾವುದೇ ಅನ್ಯ ಮಾರ್ಗವಿಲ್ಲದೆ ಅಸಹಾಯಕರಾಗಿ ಅನಿವಾರ್ಯವೆಂಬಂತೆ ಹಿಂಸೆಯನ್ನು ಅನುಭವಿಸುತ್ತಲೇ ದಿನ ಕಳೆಯುತ್ತಿದ್ದಳು ಇಂದು ಆ ಸಂಕಷ್ಟದಿಂದ ಮುಕ್ತಿ ಹೊಂದಿದ್ದಾಳೆ. ಈ ವೇಳೆ ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಭೀಮಣ್ಣ ವೈದ್ಯ ಅವರು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಹಿಳೆಗೆ ಆರೋಗ್ಯ ತಪಾಸಣೆ ಮಾಡಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಲು ಕೇಂದ್ರದ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ