ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಚಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸ್‌ರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಮರವಾಡಿಯ ಶಿವಬಸಪ್ಪ ಅಮಕ‌ರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ ವಸ್ತುಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಕಳೆದ ಜೂನ್ 28ರಂದು ಗ್ರಾಮದ ಮಲ್ಲಪ್ಪ ಮಾಂಗ್ ಎಂಬುವರ ಮನೆ ಕಳ್ಳತನವಾಗಿತ್ತು. ಮೇಲ್ಚಾವಣೆ ಕಿತ್ತು 45 ಗ್ರಾಂ ಚಿನ್ನ ಹಾಗೂ 5 ಸಾವಿರ ರೂ.ಗಳ ನಗದು ಕಳ್ಳರು ದೋಚಿದ್ದರು. ಪೋಲಿಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಅಪರ ಪೋಲಿಸ್ ಅಧೀಕ್ಷಕ ಎನ್ ಶ್ರೀನಿಧಿ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್ ತಿಗಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡರು.
ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ, ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಬಸವರಾಜ್, ಸವಿಕುಮಾರ್, ಅಯ್ಯಣ್ಣ, ಬಸವರಾಜ್, ಸಿದ್ದರಾಮೇಶ್, ಈರೇಶ್‌, ಮಂಜುನಾಥ್ ಅವರನ್ನೊಳಗೊಂಡ ತಂಡವನ್ನು ರಚಿಸಿ ಆರೋಪಿ ಕಮರವಾಡಿಯ ಶಿವಬಸಪ್ಪ ಅಮಕ‌ರ್ ಎಂಬುವನಿಗೆ ಬಂಧಿಸಿ ಒಟ್ಟು 1,30,000 ರೂ.ಗಳ ಮೌಲ್ಯದ ಚಿನ್ನದ ಆಭರಣಗಳು ಜಪ್ತಿಪಡಿಸಿಕೊಂಡು ಆರೋಪಿತನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ