ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅನಾಥ ಬಾಲಕಿ ಸಿದ್ದಮ್ಮಳನ್ನು ಕಸ್ತೂರಿ ಬಾ ಗಾಂಧಿ ಶಾಲೆಗೆ ಸೇರಿಸಿದ ರೈತ ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥ ಬಾಲಕಿ ಸಿದ್ದಮ್ಮಳಿಗೆ ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಿ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ನೇತೃತ್ವದಲ್ಲಿ ಆ ಬಾಲಕಿಯ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕ,ಶಾಲಾ ಬ್ಯಾಗ್, ಬಟ್ಟೆ ಹೊದಿಕೆ ಇನ್ನಿತರ ಸಲಕರಣೆಗಳನ್ನು ನೀಡಿ ಅವರು ಮಾತನಾಡಿ ನಮ್ಮ ರೈತ ಸಂಘಟನೆಯು ಬರೀ ರೈತರ ಸಮಸ್ಯೆಗಳಿಗೆ ಸ್ಪಂದಿಸುವುದಲ್ಲದೆ ಇನ್ನಿತರ ಸಮಾಜಮುಖಿ ಕೆಲಸಗಳಲ್ಲಿ ಕೂಡಾ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಬಾಲಕಿಯ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.ತಂದೆ ತಾಯಿಯನ್ನು ಕಳೆದುಕೊಂಡ ಅನಾಥೆ ಬಾಲಕಿ ಸಿದ್ದಮ್ಮ ಬಗ್ಗೆ ಮಾಹಿತಿ ಬಂದಾಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ್ದೆವು ನಮ್ಮ ಮನವಿಗೆ ಸ್ಪಂದಿಸಿ ಅವರು ವಿದ್ಯಾರ್ಥಿನಿಯನ್ನು ವಡಗೇರಾ ಕಸ್ತೂರಿಬಾ ಶಾಲೆಗೆ ಸೇರಿಸಲು ಅನುಕೂಲ ಮಾಡಿಕೊಟ್ಟಿರುವುದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಮತ್ತು ಕಸ್ತೂರಬಾ ಶಾಲೆಯ ಮುಖ್ಯ ಶಿಕ್ಷಕರಿಗೂ ಧನ್ಯವಾದ ತಿಳಿಸಿದರು.
ಕಸ್ತೂರಿ ಬಾ ಗಾಂಧಿ ಶಾಲೆಯ ಮುಖ್ಯ ಶಿಕ್ಷಕಿ ಲಲಿತಾಬಾಯಿ.ಎಚ್.ನಾಟೇಕರ ಅನಾಥ ಬಾಲಕಿಯನ್ನು ಶಾಲೆಗೆ ಸೇರಿಸಿಕೊಂಡು ಮಾತನಾಡಿದ ಅವರು ಸರಕಾರವು ಇಂತಹ ಮಕ್ಕಳಿಗಾಗಿ ಈ ಶಾಲೆಗಳನ್ನು ತೆರೆದಿದ್ದು ಈ ಮಗುವಿನ ಎಲ್ಲಾ ಜವಾಬ್ದಾರಿಯನ್ನು ನಾನೇ ವಹಿಸಿಕೊಂಡು ನನ್ನ ಸ್ವಂತ ಮಗಳಂತೆ ಯಾವುದೆ ಕುಂದು ಕೊರತೆ ಬಾರದ ಹಾಗೆ ಈ ಬಾಲಕಿಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು ರೈತ ಸಂಘದ ಈ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸಿ.ಆರ್.ಪಿ. ಮಲಿಕೇಪ್ಪ ನಾಶಿ, ಕ್ಯಾತನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಬಾಗಲಿ,ರೈತ ಸಂಘದ ಮುಖಂಡರುಗಳಾದ ನೂರ್ ಅಹಮದ್,ಗುರುನಾಥ್ ರೆಡ್ಡಿ ಹದನೂರು,ಶಿವಶರಣಪ್ಪ ಸಾಹುಕಾರ,ವೆಂಕುಬ ಕಟ್ಟಿಮನಿ,ವಡಗೇರಾ ತಾಲ್ಲೂಕು ಅಧ್ಯಕ್ಷ ವಿದ್ಯಾಧರ್ ಜಾಕ,ಮಹೀಪಾಲ್ ರೆಡ್ಡಿ,ಶರಣು ಜಡಿ ತಾಲ್ಲೂಕು ಗೌರವಾಧ್ಯಕ್ಷ,ನಾಗರಾಜ್ ಸ್ವಾಮಿ ಹೀರೇಮಠ,ಹಳ್ಳೆಪ್ಪ ತೇಜೇರ್,ಶಿವು ಗೋನಾಲ್,ಮಹಮ್ಮದ್ ಗ್ಯಾರೇಜ, ನಿಂಗು ಕುರ್ಕಳ್ಳಿ,ಕೃಷ್ಣಾ ಟೇಲರ್,ಶರೀಫ್ ಕುರಿ, ಬೀರಪ್ಪ ಜಡಿ,ಮಲ್ಲು ನಾಟೇಕಾರ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ