ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಲಿಹೈದರ್ ಗ್ರಾಮದಲ್ಲಿ ಡೆಂಗ್ಯೂ ದೃಢ:ಕಣ್ಮುಚ್ಚಿ ಕುಳಿತ ಪಿಡಿಓ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಪ್ರತಿಯೊಂದು ವಾರ್ಡ್‌​ಗ​ಳಲ್ಲಿ
ಚರಂಡಿ​ಗಳಲ್ಲಿನ ಗಲೀಜಿನಿಂದಾಗಿ ಸೊಳ್ಳೆ​ಗಳು
ವಿಪ​ರೀ​ತ​ವಾ​ಗಿದ್ದು,ಇವು​ಗಳ ನಿಯಂತ್ರ​ಣಕ್ಕೆ ಗ್ರಾಮ ಪಂಚಾಯಿತಿ ಅಧಿ​ಕಾ​ರಿ​ಗಳು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಐದಾರು‌‌ ಬಾರಿ ಫಾಗಿಂಗ್ ಮಾಡಬೇಕು ಆದರೆ ಒಂದು ಸಲ ಮಾತ್ರ ಫಾಗಿಂಗ್ ಮಾಡಿ ಸುಸ್ತಾಗಿ ಕುಳಿತ ಗ್ರಾಮ ಪಂಚಾಯಿತಿ ಸಿಬ್ಬಂದಿ, ಪಿಡಿಓ ಇದರಿಂದಾಗಿ ಇಂದು
ಗ್ರಾಮಸ್ಥರು ಕನಕಗಿರಿ ಹಾಗೂ ಕೊಪ್ಪಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಸ್ವಚ್ಛತೆ ಮಾಡುವ ಉದ್ದೇಶಕ್ಕೆ ಸಾಕಷ್ಟು ಅನುದಾನ ಬಂದರೂ ಸಹ ಸಮಯಕ್ಕೆ ಸರಿಯಾಗಿ ಬಳಸಿಕೊಳ್ಳದೆ ಈ ರೀತಿ ಸಾರ್ವಜನಿಕರು ಆಸ್ಪತ್ರೆಯಲ್ಲಿ ಕಾಲ ಕಳೆಯುವಂತಾಗಿದೆ. ಕಳೆದ ಎರಡು ತಿಂಗಳು ಹಿಂದೆ ಗ್ರಾಮದ ತೆಗ್ಗಿನಲ್ಲಿ ನೀರು ನಿಲ್ಲ​ದಂತೆ ನೋಡಿ​ಕೊ​ಳ್ಳುವ ಹೊಣೆ​ಗಾ​ರಿಕೆಯನ್ನು ಗ್ರಾಮ ಪಂಚಾಯಿತಿ
ನಿರ್ವ​ಹಿ​ಸಿದ್ದರೆ ಇಂದು ಡೆಂಗ್ಯೂ ಇಷ್ಟು ಹರಡುತ್ತಿರಲಿಲ್ಲ‌ ಎನ್ನುತ್ತಾರೆ ಗ್ರಾಮಸ್ಥರು.ಇನ್ನಾದರೂ ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿಗಳು,ಸಿಬ್ಬಂದಿ ಈ ಬಗ್ಗೆ ಗಮನ ಹರಿಸುತ್ತಾರಾ ಎಂದು ಕಾದು ನೋಡಬೇಕಿದೆ.

ವರದಿ ಹನುಮಂತಪ್ಪ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ