ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನಸ್ಪಂದನಾ ಸಭೆಯಲ್ಲಿ 51 ಅರ್ಜಿ ಸಲ್ಲಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಮಸ್ಯೆ, ತೊಂದರೆ ಆಲಿಸಲು ಮತ್ತು ಪರಿಹಾರ ಮಾಡಲೆಂದು ಪುರಸಭೆಯಿಂದ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿವೆ.
ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ಆಲಿಸಲು ಕಳ್ಳಿ ಬಸವಣ್ಣ ಮಂದಿರದಲ್ಲಿ ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಮರತೂರಕರ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂಧನಾ ಸಭೆಯಲ್ಲಿ ಪುರಸಭೆ ಮತ್ತು ಕಂದಾಯ ಇಲಾಖೆಯ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ಕಂದಾಯ ಇಲಾಖೆಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಕುರಿತು
ಅರ್ಜಿ ಬಂದಿವೆ. ಜೆಸ್ಕಾಂ ಇಲಾಖೆ
ಸಂಬಂಧಿತವಾಗಿ ವಿದ್ಯುತ್ ಪರಿವರ್ತಕ ಸ್ಥಳಾಂತರ ಮತ್ತು ಜೋತು ಬಿದ್ದು ವಿದ್ಯುತ್ ತಂತಿ ಸರಿಪಡಿಸಲು ಅರ್ಜಿ ಬಂದಿವೆ. ಗೃಹಭಾಗ್ಯ ಯೋಜನೆ ಕುರಿತು ಸಿಡಿಪಿಒ ಇಲಾಖೆಗೆ ಅರ್ಜಿ ಸಲ್ಲಿಕೆಯಾಗಿವೆ. ಎಲ್ಲಾ ಅರ್ಜಿಗಳನ್ನು ಸಂಬಂಧಿತ ಇಲಾಖೆಗೆ ಕಳಿಸಿ ಸಮಸ್ಯೆ ಪರಿಹರಿಸಲು ಕ್ರಮ ಜರುಗಿಸುವಂತೆ ಸೂಚಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಹೇಳಿದರು.
ವಿದ್ಯುತ್ ಪರಿವರ್ತಕ ಸ್ಥಳಾಂತರ ಕುರಿತು ಸಾರ್ವಜನಿಕರ ಬೇಡಿಕೆಯಂತೆ ಸಭೆ ನಂತರ ಜೆಸ್ಕಾಂ ಎಂಜಿನಿಯರ್ ಜೊತೆಗೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಮನೆ ಸೌಲಭ್ಯ ನೀಡುವಂತೆ ಪುರಸಭೆಗೆ ಅರ್ಜಿಗಳು ಸಲ್ಲಿಕೆಯಾಗಿವೆ. ಬರುವ ದಿನಗಳಲ್ಲಿ ಆದ್ಯತೆಯ ಮೇರೆಗೆ ಸೌಲಭ್ಯ ನೀಡಲು ಹಾಗೂ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಪುರಸಭೆ ಸದಸ್ಯರಾದ ರಮೇಶ ಬಮ್ಮನಳ್ಳಿ, ಪ್ರಭು ಗಂಗಾಣಿ ಅವರು ಉಪಸ್ಥಿತರಿದ್ದರು.

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ