ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ವಜ್ಞ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಮನೆ-ಮನೆಗೂ ಸರಕಾರಿ ಸೌಲಭ್ಯ ಜಾಗೃತಿ

ಶಹಾಪುರ:ಸರ್ಕಾರ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಿದೆ ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಖ್ಯಾತ ವೈದ್ಯರಾದ ಡಾ|| ಚಂದ್ರಶೇಖರ ಸುಬೇದಾರ ಹೇಳಿದರು.
ನಗರದ ಕುಂಬಾರ ಬಡಾವಣೆಯಲ್ಲಿ ಸರ್ವಜ್ಞ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ಮನೆ-ಮನೆಗೂ ಸರಕಾರಿ ಸೌಲಭ್ಯ ಎಂಬ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಸಮಾಜ ಅಭಿವೃದ್ಧಿ ಆಗಬೇಕಾದರೆ ಎಲ್ಲರೂ ಶ್ರಮಿಸಬೇಕು. ಎಲ್ಲರನ್ನೂ ಒಗ್ಗೂಡಿಸುವ ಕೆಲಸವನ್ನು ಮಾಡಿದಾಗ ಮಾತ್ರ ಸಮಾಜದ ಕಟ್ಟಕಡೆ ವ್ಯಕ್ತಿಗೆ ಸರಕಾರಿ ಸೌಲಭ್ಯ ದೊರೆಯುತ್ತದೆ. ಇಂತಹ ಪ್ರಾಮಾಣಿಕ ಪ್ರಯುತ್ನದ ಮೂಲಕ ಸಾರ್ವಜನಿಕರಿಗೆ ಸರಕಾರಿ ಸೌಲಭ್ಯ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮುಟ್ಟಿಸುವ ಇಂತಹ ಕಾರ್ಯಕ್ರಮ ಮಾಡುತ್ತಿರುವ ಸರ್ವಜ್ಞ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಅವರು ಹೇಳಿದರು.
ನಂತರ ಮಾತನಾಡಿ ಸಂಸ್ಥೆಯ ಅಧ್ಯಕ್ಷರಾದ ಸಂಗಮೇಶ ಕುಂಬಾರ ಸರಕಾರ ನಿರ್ಗತಿಕರಿಗೆ ಬಡವರಿಗೆ ಹಿಂದುಳಿದವರೆಗೆ ಸಾಕಷ್ಟು ಯೋಜನೆಗಳ ಜಾರಿಗೊಳಿಸಿದ್ದು ಇದನ್ನು ಅಧಿಕಾರಿ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಜನರಿಗೆ ಸಮರ್ಪಕವಾಗಿ ಜಾರಿಗೆ ಬಂದಲ್ಲಿ ಮಾತ್ರ ಲಾಭವನ್ನು ಬಡ ಫಲಾನುಭವಿಗಳು ಪಡೆಯಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗುಂಡಪ್ಪ ತುಂಬಗಿ, ಶಿವಣ್ಣ ಇಜೇರಿ,ಆಡೆವೆಪ್ಪ ಜಾಕಾ,ಸಂಸ್ಥೆಯ ಅಧ್ಯಕ್ಷರಾದ ಸಮಾಜ ಸೇವಕರು ಸಂಗಮೇಶ ಕುಂಬಾರ,ಸರಕಾರಿ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿದ್ರಾಮಪ್ಪ ಕುಂಬಾರ,ಬಸವರಾಜ ಕುಂಬಾರ,ಸುಭಾಷ ಹೊತಪೇಠ,ಉಮೇಶ ಗುಡಗುಂಟಿ,ಶರಣು ಯಡ್ರಾಮಿ,ಶರಣು ಐಕೂರ ಇನ್ನಿತರ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ