ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909
                    ‌                                     ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ ಜಯಂತಿ ಆಚರಿಸಲು ತೀರ್ಮಾನ
                    ‌                                     ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ ಜಯಂತಿ ಆಚರಿಸಲು ತೀರ್ಮಾನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಾ ಆಡಳಿತದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 890 ನೇ ಜಯಂತೋತ್ಸವದ ಕಾರ್ಯಕ್ರಮ ಪೂರ್ವಭಾವಿ ಸಭೆಯು ತಹಸೀಲ್ದಾರ್ ಅಂಭ್ರೇಶ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಜರುಗಿತು. ಇದೇ ಜುಲೈ 23 ರಂದು ಮಂಗಳವಾರ ದಿನದಂದು ವಿಶ್ವಗುರು ಬಸವಣ್ಣನವರ ಆಪ್ತಕಾರ್ಯದರ್ಶಿ ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತೋತ್ಸವವನ್ನು ತಾಲ್ಲೂಕಾ ಆಡಳಿತದಿಂದ ಕಚೇರಿ ಸಭಾಂಗಣದಲ್ಲಿಯೇ ಬೆಳಿಗ್ಗೆ 10 ಗಂಟೆಗೆ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ತಹಶಿಲ್ದಾರ ಅಂಭ್ರೇಶ ಮಾತನಾಡಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ತಮ್ಮ ಸಮುದಾಯ ಜನರೊದಿಂದಗೆ ಎಲ್ಲರ ಅಭಿಪ್ರಾಯದಂತೆ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು ಎಂದರು, ಚಿತ್ತಾಪುರ ತಾಲೂಕಿನ ಹಡಪದ ಅಪ್ಪಣ್ಣ ಸಮಾಜದ ತಾಲೂಕಾಧ್ಯಕ್ಷ -ಭೀಮರಾವ್ ಹಡಪದ ಮಾಸ್ತರ, ಮತ್ತು ತಾಲೂಕು ಕಾರ್ಯಾಧ್ಯಕ್ಷ ನಾಗರಾಜ ಹಡಪದ ಸಾತನೂರ, ಅವರು ನಮ್ಮ ಚಿತ್ತಾಪುರ ತಾಲೂಕಿನ ಹಡಪದ ಅಪ್ಪಣ್ಣ ಸಮಾಜದ ಭಾಂಧವರು,ಸಮಾಜದ ಹಿರಿಯ ಮುಖಂಡರು, ಯುವಕರು,ಮಹಿಳಾ ತಾಯಂದಿರು ಮತ್ತು
ಸಮಾಜ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಶರಣ ಹಡಪದ ಅಪ್ಪಣ್ಣ ನವರ ಜಯಂತೋತ್ಸವದಲ್ಲಿ ಭಾಗವಹಿಸಿ ಎಂದು ಕೋರಿದರು.ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ತಾಲೂಕು ಕಾರ್ಯದರ್ಶಿ ಶಂಕರ್ ಹಡಪದ ಚಿತ್ತಾಪುರ ಅವರು ಈ ಪತ್ರಿಕೆಯ ಮೂಲಕ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಯಶಸ್ವಿಯಾಗಿ ಆಚರಣೆ ಮಾಡಲು ಸಮಾಜದ ಬಂಧುಗಳಲ್ಲಿ ವಿನಂತಿಸಿಕೊಂಡರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ