ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎ ಪಿ ಡಿ ಸಂಸ್ಥೆಯಿಂದ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ “ದಿವ್ಯಾಂಗರಿಗೆ ಅನುಕಂಪ ಬೇಡ ಅವಕಾಶ ಕೊಡಿ”

ಗುರುಮಿಟ್ಕಲ್ ತಾಲೂಕಿನ ಕೊಂಕಲ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ದಿ ಅಸೋಸಿಯೇಷನ್ ಪೀಪಲ್ ವಿತ್ ದಿಸೆಬಿಲಿಟಿ ಸಂಸ್ಥೆ” ಯಾದಗಿರಿ ವತಿಯಿಂದ ಹಮ್ಮಿಕೊಂಡಿದ್ದ. ಅಂಗವಿಕಲರು ಬಳಸುವ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮಕ್ಕೆ ಡಾ.ಉದಯ್ ಕುಮಾರ್ ಆರೋಗ್ಯ ಅಧಿಕಾರಿಗಳು ಚಾಲನೆ ನೀಡಿ ಮಾತನಾಡಿದ ಅವರು ” ಅಂಗವಿಕಲರಿಗೆ ಅನುಕಂಪ ತೋರಿಸುವುದಕ್ಕಿಂತ ಅವರಿಗೆ ಅವಕಾಶ ನೀಡುವುದು ಅವಶ್ಯಕವಾಗಿದೆ,ಎಂದು ತಿಳಿಸಿದರು. ಅಂಗವಿಕಲರ ಹಾರೈಕೆ ಮತ್ತು ಶ್ರೀಯೊಭಿವೃದ್ಧಿಗಾಗಿ ಶ್ರಮಿಸುತ್ತಿರುವ ಎ.ಪಿ.ಡಿ ಸಂಸ್ಥೆಯ ಇಂತಹ ಸಮಾಜಮುಖಿ ಕಾರ್ಯಗಳು ಸದಾ ಕಾಲ ಮುಂದುವರಿಯಲಿ ಎಂದು ಹಾರೈಸಿದರು‌. ಈ ಸಂದರ್ಭದಲ್ಲಿ ಮಹಮ್ಮದ್ ಕಾಸಿಂ ಕೊಂಕಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಹಾಗೂ ಎ.ಪಿ.ಡಿ ಸಂಸ್ಥೆಯ ತಾಲೂಕ ಸಂಯೋಜಕರಾದ ವಿರುಪಾಕ್ಷಿ ಮಾಲಿ ಪಾಟೀಲ್ ಹಾಗೂ ಡಾ. ರಾಜೇಶ್ವರಿ ,ಶಿಲ್ಪ ,ಮಲ್ಲಿಕಾರ್ಜುನ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು. ಎ.ಎಫ್.ಓ.ಆರ್ಟಿಫಿಷಿಯಲ್ ಲಿಂಬ್, ಸ್ಟಾಂಡಿಗ್ ಪ್ರೇಮ್, ಸಿ.ಪಿ ಚೇರ್ ಇನ್ನಿತರ ಸಾಧನಗಳನ್ನು ವಿತರಿಸಲಾಯಿತು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ