ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಟ್ಟದ ಪ್ರಗತಿಪರ ರೈತ-ರೈತ ಮಹಿಳೆಯರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಪ್ರತಿ ವರ್ಷದಂತೆ ಈ ವರ್ಷವೂ “ಪ್ರಗತಿಪರ ರೈತ-ರೈತ ಮಹಿಳೆ” ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ, ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲೆಯ ಆಸಕ್ತ ರೈತ/ರೈತ ಮಹಿಳೆಯರು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ ೨೦-೦೮-೨೦೨೪ ರೊಳಗೆ ಶಿವಮೊಗ್ಗ ಜಿಲ್ಲೆಯ ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರಿಗೆಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗಕ್ಕೆ ತಲುಪಿಸತಕ್ಕದ್ದು. ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪತ್ರ ಹಾಗು ರೂ.೫,೦೦೦/- ನಗದು ಪುರಸ್ಕಾರ ನೀಡಲಾಗುವುದು.

ಅರ್ಜಿಗಳನ್ನು ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರ, ನವುಲೆ, ಶಿವಮೊಗ್ಗ ಅಥವಾ ಕೃಷಿ ಇಲಾಖೆ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಖುದ್ದಾಗಿ ಬಂದು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಡಾ.ಸಹನ ಎಸ್., ವಿಜ್ಞಾನಿ ಕೃಷಿ ವಿಸ್ತರಣೆ, ಮೊಬೈಲ್ ನಂ. ೮೭೯೨೮೧೪೨೯೨, ಹಾಗೂ ಡಾ.ಮಂಜುನಾಥ ಕುದುರಿ, ವಿಜ್ಞಾನಿ ಕೃಷಿ ವಿಸ್ತರಣೆ, ಮೊಬೈಲ್ ನಂ.೯೪೮೦೭೫೧೬೦೬ ಅಥವಾ ಡಾ. ನಾಗರಾಜ.ಆರ್., ಕಾರ್ಯಕ್ರಮ ಸಹಾಯಕರು ಕೆ.ವಿ.ಕೆ., ಶಿವಮೊಗ್ಗ, ಮೊಬೈಲ್ ನಂ. ೯೩೫೩೪೯೩೮೨೪ ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ