ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡಾಪಟುಗಳು ಸೋಲು-ಗೆಲುವು ಸಮನಾಗಿ ಸ್ವೀಕರಿಸಬೇಕು: ಇಂದ್ರಾಣಮ್ಮ

ಪಾವಗಡ: ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ಉದ್ಘಾಟನೆಯನ್ನು ನೆರವೇರಿಸಿ ಕ್ರೀಡಾಪಟುಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ತಿಳಿದರು.

2024-25 ನೇ ಸಾಲಿನ ನೀಡಗಲ್ ಹೋಬಳಿಯ ಹೋಬಳಿ ಮಟ್ಟದ ಪ್ರೌಢಶಾಲ ವಿಭಾಗದ ಕ್ರೀಡಾಕೂಟವನ್ನು ಪಟ್ಟಣದ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಆಯೋಜನೆ ಮಾಡಿಲಾಗಿತ್ತು.
ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಉತ್ತಮ ಆಟವನ್ನು ಆಡಿದಂತ ಕ್ರೀಡಾ ಪಟುಗಳು ಮಾತ್ರ ಗೆಲ್ಲಲು ಸಾಧ್ಯವಾಗುತ್ತದೆ, ಆದ್ದರಿಂದ ಸೋತರು ಕೂಡಾ ನೀವು ಸಮಾನ ಮನಸ್ಸಲ್ಲಿಂದ ಗೆಲ್ಲುವವರಿಗೆ ಶುಭಾಶಯ ತಿಳಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕ್ರೀಡಾಪಟುಗಳಿಗೆ ಅವರು ತಿಳಿಸಿದರು.

ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶಂಕರಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಕ್ರೀಡೆ ಓದಿನ ಜೊತೆ ಜೊತೆಗೆ ಕ್ರೀಡೆಯನ್ನು ಆಡುವುದನ್ನು ಅಲವಡಿಸಿಕೊಳ್ಳಬೇಕು, ಕ್ರೀಡೆಯು ಕೇವಲ ಆಟವಷ್ಟೇ ಅಲ್ಲಾ ಆರೋಗ್ಯಕ್ಕೂ ಉಪಯುಕ್ತವಾಗಿದೆ ಹಾಗಾಗಿ ಓದಿನ ಜೊತೆಗೆ ಕ್ರೀಡೆಯನ್ನು ರೂಡಿಸಿಕೊಳ್ಳಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು,ಬಿ.ಆರ್.ಸಿ.ವೆಂಕಟೇಶ್, ನಿವೃತ್ತ ದೈಹಿಕ ಶಿಕ್ಷಕರಾದ ಹನುಮಂತ ರಾಯಪ್ಪ, ದೈಹಿಕ ಶಿಕ್ಷಕರು,ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಹಾಜರಾಗಿದ್ದರು.

ವರದಿ:ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ