ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಗುವಿಗೆ ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ:ಕುಮಾರಿ ತ್ರಿವೇಣಿ

ರಾಯಚೂರು:ಮಗುವಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನ ಹಾಲನ್ನು ಮಗುವಿಗೆ ಕುಡಿಸಬೇಕು ಎಂದು ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಅವರು ಹೇಳಿದರು.

ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ,ಜಿ.ಪಂ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಇಂದು ವಿಶ್ವ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಮಾತನಾಡಿ ಹೆರಿಗೆಯಾದ ತಕ್ಷಣ ಮಗುವಿಗೆ ತಾಯಿ ತನ್ನ ಎದೆ ಹಾಲನ್ನು ಕುಡಿಸಬೇಕು ತಾಯಿಯ ಎದೆ ಹಾಲನ್ನು ಕುಡಿಸುವುದರಿಂದ ಮಗುವಿಗೆ ಬರುವ ರೋಗಗಳು ಬಾರದಂತೆ ತಡೆಗಟ್ಟುವ ಜೊತೆಗೆ ತಾಯಿಯ ಹಾಲು ಮಗುವಿಗೆ ಜೀವ ರಕ್ಷಕ ಇದ್ದಂತೆ ಇದರಿಂದ ತಾಯಿಯ ಸೌಂದರ್ಯ ಹೆಚ್ಚಿಸುವ ಜೊತೆಗೆ ತಾಯಿ ಮಗುವಿನ ಬಾಂಧವ್ಯ ಬೆಳೆಯುತ್ತದೆ.ತಾಯಿ ಹಾಲನ್ನು ಮಗುವಿಗೆ ಕುಡಿಸಿದರೆ ತನ್ನ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣ ನೀಡಿ ಹಾಲನ್ನು ಕುಡಿಸದೆ ನಿರ್ಲಕ್ಷ್ಯ ಮಾಡಿದರೆ ಸ್ತನ ಕ್ಯಾನ್ಸರ್ ಬಂದು ಜೀವಕ್ಕೆ ಅಪಾಯವಾಗುತ್ತದೆ ಆದ್ದರಿಂದ ಎಲ್ಲಾ ತಾಯಂದಿರು ತಮ್ಮ ಮಗುವಿಗೆ ತಪ್ಪದೆ ಎದೆ ಹಾಲನ್ನು ಕುಡಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ,PHCO ಮೋದೀನ್ ಬೀ,ಅಂಗನವಾಡಿ ಕಾರ್ಯಕರ್ತೆಯರಾದ ವಜ್ರಮ್ಮ, ಬಡೇಮಾ,ಬಸಮ್ಮ,ಅಮೃತಾ,ಆಶಾ ಕಾರ್ಯಕರ್ತೆಯರಾದ ನಬೇಬಿ ಯಂಕಮ್ಮ,ಊರಿನ ಗರ್ಭಿಣಿಯರು,ಬಾಣಂತಿಯರು ಮಹಿಳೆಯರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ