ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿ.ಎಸ್.ಸಜ್ಜನ ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಬಾಗಲಕೋಟೆ: ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಎನ್.ಎಸ್.ಎಸ್. ಶಿಬಿರಾರ್ಥಿಗಳಿಂದ ದತ್ತುಗ್ರಾಮ ಚಿಟಗಿನಕೊಪ್ಪ ಗ್ರಾಮದಲ್ಲಿ ವಿವಿಧ ಕಡೆಗಳಲ್ಲಿ ಶ್ರಮದಾನ ಕಾರ್ಯಗಳು ಜರುಗಿದವು.

ಗ್ರಾಮದ ಸಾರ್ವಜನಿಕ ದೇವಸ್ಥಾನಗಳನ್ನು ಸ್ವಚ್ಛಗೊಳಿಸಿವುದು, ಶಾಲಾ ಆವರಣವನ್ನು ಸಮತಟ್ಟಗೊಳಿಸುವುದು, ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುತ್ತಾ ಗ್ರಾಮದ ಚರಂಡಿಗಳ ಸ್ವಚ್ಛತಾ,ರಸ್ತೆಯ ಇಕ್ಕೆಲಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಸಸಿಗಳನ್ನು ನೆಟ್ಟು ಪರಿಸರ ಪ್ರೇಮ ತೋರಿದ ಶಿಬಿರಾರ್ಥಿಗಳು:

ಚಿಟಗಿನಕೊಪ್ಪ ಗ್ರಾಮದ ಶಾಲಾ ಆವರಣದ ವಿವಿಧ ಕಡೆಗಳಲ್ಲಿ, ಗ್ರಾಮದ ರಸ್ತೆಯ ಎಡಬಲಗಳಲ್ಲಿ ನಾನಾ ಬಗೆಯ ಸಸಿಗಳನ್ನು ನೆಡುವ ಭಾಗವಾಗಿ ಆಲ,ಬೇವು,ಅಶೋಕ, ಕರಿಬೇವು, ತೇಗ,ಹೆಬ್ಬೇವು, ಬಾದಾಮಿ, ಮುಂತಾದ ಸಸಿಗಳನ್ನು ನೆಟ್ಟು ಸಸ್ಯ ಸಂಪತ್ತಿನ ಬಗ್ಗೆ ಕಾಳಜಿ ಮೂಡಿಸುತ್ತಾ ಪರಿಸರ ಪ್ರೇಮ ಮೆರೆದರು.

ಶಾಲಾ ಕಾರ್ಯಕ್ರಮ ಕಟ್ಟೆ ದುರಸ್ತಿ:

ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿನ ಕಾರ್ಯಕ್ರಮ ವೇದಿಕೆಯ ಕಟ್ಟೆಯನ್ನು ದುರಸ್ತಿಗೊಳಿಸುವ ಕಾರ್ಯದಲ್ಲಿ ಎನ್.ಎಸ್.ಎಸ್. ಶಿಬಿರಾರ್ಥಿಗಳು ಭಾಗಿಯಾಗಿ ವೇದಿಕೆಯ ಕಟ್ಟೆಯನ್ನು ಎತ್ತರಗೊಳಿಸಿ, ಮೆಟ್ಟಿಲುಗಳ ವ್ಯವಸ್ಥೆ ಕಲ್ಪಿಸಿ ಶಾಲಾ ವೇದಿಕೆಯನ್ನು ಸುಸಜ್ಜಿತವಾಗಿ ಮರು ನಿರ್ಮಾಣ ಮಾಡಿ ಅದೇ ವೇದಿಕೆಯಲ್ಲಿ ಶಿಬಿರಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ