ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಮುಖ್ಯರಸ್ತೆಯು ಗುಂಡಿ ಬಿದ್ದು ಹದಗೆಟ್ಟಿರುವ ಕಾರಣ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಈ ರಸ್ತೆಯಿಂದ ಅನೇಕ ಜನ ರೈತರಿಗೆ ವಿದ್ಯಾರ್ಥಿಗಳಿಗೆ ಅಂಗವಿಕಲರಿಗೆ ಹಾಗೂ ವಯಸ್ಕರರಿಗೆ ತೊಂದರೆಯಾಗುತ್ತಿದೆ ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರಲು ಮತ್ತು ಕೃಷಿ ಚಟವಟಿಕೆಗೆಂದು ಹೊಲಗಳಿಗೆ ಹೋಗುವ ರೈತರು ಹಾಗು ಬೈಕ್ ಸವಾರರು ರಸ್ತೆಯಲ್ಲಿ ಹೋಗುವುದಕ್ಕೆ ಹರಸಾಹಸ ಪಡಬೇಕಾಗಿದೆ ಅದರಲ್ಲೂ ಪ್ರತೀ ವರ್ಷ ಮಳೆಗಾಲದಲ್ಲಿ ಮಳೆ ಬಂದಾಗ ರಸ್ತೆಯು ಸಂಪೂರ್ಣ ಹದಗೆಟ್ಟಿರುತ್ತದೆ. ಈ ಸಮಸ್ಯೆಯನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಆದಷ್ಟು ಬೇಗ ಸರಿಪಡಿಸಬೇಕು ಎಂದು ಗ್ರಾಮಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ವರದಿ: ಸಂದೀಪ್ ಕುಮಾರ್.




















