ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಮಹೋತ್ಸವ ಹಾಗೂ ತಾಯಿಗೊಂದು ಮರ ಕಾರ್ಯಕ್ರಮ,500 ವಿದ್ಯಾರ್ಥಿಗಳಿಗೆ 500 ಸಸಿಗಳ ವಿತರಣೆ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಶಾಂತಿ ನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಿರವಾರ ಹಾಗೂ ವನಸಿರಿ ಫೌಂಡೇಶನ್ ರಾಜ್ಯ ಘಟಕ ರಾಯಚೂರು ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ತಾಯಿಗೊಂದು ಮರ ಕಾರ್ಯಕ್ರಮ,500 ವಿದ್ಯಾರ್ಥಿಗಳಿಗೆ 500 ಸಸಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ 36ನೇ ಹುಟ್ಟು ಹಬ್ಬವನ್ನು ಶಾಲೆಯ ಆವರಣದಲ್ಲಿ ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಶಾಲೆಯ ವಿದ್ಯಾರ್ಥಿಗಳಿಗೆ 500 ಸಸಿಗಳನ್ನು ಉಚಿತವಾಗಿ ವಿತರಣೆ ಮಾಡುವ ಮೂಲಕ ಆಚರಿಸಲಾಯಿತು.

ಅಮರೇಗೌಡ ಮಲ್ಲಾಪೂರ ಅವರು ಮಕ್ಕಳಿಗೆ ಉಚಿತವಾಗಿ ಸಸಿಗಳನ್ನು ನೀಡಲಾಗಿದ್ದು ಅವುಗಳನ್ನು ಮರವಾಗಿ ಬೆಳಸಿದವರಿಗೆ ಮುಂದಿನ ವರ್ಷ ಬಹುಮಾನ ನೀಡಿ ಗೌರವಿಸಲಾಗುವುದು.ತಾಯಿಗೆ ಹೇಗೆ ಬೆಲೆಕಟ್ಟಲಿಕ್ಕೆ ಆಗುವುದಿಲ್ಲವೋ ಹಾಗೆಯೇ ಮರಗಳಿಗೂ ಕೂಡ ಬೆಲೆ ಕಟ್ಟಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಮರಗಳನ್ನು ಬೆಳಸಿ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡಲು ಪ್ರಯತ್ನಿಸಬೇಕು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಬಸಲಿಂಗಪ್ಪ ಅರಕೇರಿ, ಪ್ರಾಚಾರ್ಯರಾದ ಅನುರಾಧ,ಮುಖ್ಯಗುರು ಬಾಬು,ಮಹೇಶ ಅರಕೇರಿ, ವನಸಿರಿ ಫೌಂಡೇಶನ್ ಸದಸ್ಯರಾದ ಗಿರಿಸ್ವಾಮಿ ಹೆಡಗಿನಾಳ,ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ, ಚನ್ನಪ್ಪ ಕೆ.ಹೊಸಹಳ್ಳಿ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ವೀರಬದ್ರಯ್ಯ ಸ್ವಾಮಿ ತಿಮ್ಮಾಪೂರ,ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ