ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬರಲ್ಲಿರಬೇಕು:ಡಾ. ಗಣಪತಿ ಲಮಾಣಿ

ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು.

ಕೊಪ್ಪಳ:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು 78ನೇ ಸ್ವಾತಂತ್ರ ದಿನಾಚರಣೆಯ ದ್ವಜಾರೋಹಣ ಮಾಡಿ ಮಾತನಾಡಿದರು.
ನಮ್ಮ ದೇಶದಲ್ಲಿ ಎಲ್ಲರೂ ಸಮಾನರು ಭಾರತ ವಿವಿಧತೆಯಲ್ಲಿ ಏಕತೆಯಿರುವ ದೇಶ. ದೇಶಕ್ಕಾಗಿ ಗಾಂಧೀಜಿ, ಅಂಬೇಡ್ಕರ್ ಹಾಗೂ ಇನ್ನಿತರರು ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗವಿಸಿದ್ದಪ್ಪ ಮುತ್ತಾಳ ಅವರು ಮಾತನಾಡುತ್ತ ಎಲ್ಲರೂ ರಾಷ್ಟ್ರೀಯ ಮನೋಭಾವನೆ ಬೆಳಿಸಿಕೊಳ್ಳಬೇಕು. ನಮಗೆ ಸಿಕ್ಕಿರುವ ಮುಲಬೂತ ಹಕ್ಕುಗಳನ್ನು ಬಳ್ಸಿಕೊಳ್ಳಬೇಕು. ನಾವು ದೇಶಕ್ಕಾಗಿ ಏನಾದರೂ ಸೇವೆ ಮಾಡಬೇಕು. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಆಗ ಮಾತ್ರ ಸುಭದ್ರ ದೇಶ ಕಟ್ಟಬಹುದು ಹೇಳಿದರು.
ಕಾಲೇಜಿನ ವಾಣಿಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಪಕರಾದ ವಿಟೊಬ ಅವರು ಮಾತನಾಡುತ್ತ ಸ್ವತಂತ್ರ ಭಾರತದಲ್ಲಿ ಸ್ವತಂತ್ರ ಬದಕನ್ನು ಕಾಣುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ನಮ್ಮ ಪೂರ್ವಿಕರ ಶ್ರಮ ಮತ್ತು ಹೋರಾಟ ಕಾರಣವಾಗಿದೆ
ನಮಗೆ ಏಕತೆ ಮಂತ್ರವಾಗಬೇಕು ಮೊದಲು ನಾವು ಪರರ ಆಡಳಿತಕ್ಕೆ ಒಳಪಟ್ಟಿದ್ದೇವೆ.
ನಾವು ಮೂಲಭೂತ ಹಕ್ಕುಗಳನ್ನು ಅನುಭವಿಸಬೇಕು. ನಮಗೆ ಉತ್ತಮವಾದ ಸಂವಿಧಾನವನ್ನು ಅಂಬೇಡ್ಕರ್ ಅವರು ಕೊಟ್ಟಿದ್ದರೆ.
ನಾವು ಎಲ್ಲರೂ ದೇಶಕ್ಕೆ ಶ್ರಮ ಪಡಬೇಕು ನಮಗೆ ಸಂಹಿಷ್ಣತೆ ಇರಬೇಕು ಭಾವಕ್ಯೆತೆ ಇರುತ್ತದೆ. ದೇಶದಲ್ಲಿ ಇಂದು ಎಲ್ಲರೂ ಒಗ್ಗಟ್ಟು ಇರಬೇಕು ಧಾರ್ಮಿಕ ಕಲಹಗಳಿಗೆ ಬಲಿಯಾಗಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರಸಿಂಹ ಮಾತನಾಡಿದರು. ಡಾ. ಪ್ರದೀಪ್ ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಡಾ. ಹುಲಿಗೆಮ್ಮ, ಸುಮಿತ್ರಾ, ನಾಗರತ್ನ ತಮ್ಮಿನಾಳ, ಡಾ.ಮಲ್ಲಿಕಾರ್ಜುನ, ಡಾ. ಪ್ರದೀಪ್ ಕುಮಾರ್, ಡಾ. ಅಶೋಕ್ ಕುಮಾರ್, ಅಲ್ಲಾಬಕ್ಷ, ಸೌಮ್ಯ ಹಿರೇಮಠ, ಹನುಮಪ್ಪ, ಹಾಗೂ ಕಾಲೇಜಿನ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ