ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಐತಿಹಾಸಿಕ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಉಳಿಸಿ -ಬೆಳೆಸಬೇಕು : ನಾಗರಾಜ್

ಕೊಪ್ಪಳ:ನಮ್ಮ ಐತಿಹಾಸಿಕ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಉಳಿಸ-ಬೆಳಸಬೇಕು ಎಂದು ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾದ ಶ್ರೀ ನಾಗರಾಜ ಅವರು ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಪುರತತ್ವ ವಸ್ತು ಸಂಗ್ರಾಹಯಲಯ ಮತ್ತು ಪರಂಪರೆ ಮೈಸೂರು ಹಾಗೂ ಇತಿಹಾಸ ವಿಭಾಗ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ ಸಹಯೋಗದಲ್ಲಿ ನಡೆದ ಪರಂಪರೆ ಕೂಟ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಅವರು ಮುಂದುವರೆದು ಮಾತನಾಡುತ್ತಾ ಕೋಟೆಗಳನ್ನು, ದೇವಾಲಯಗಳನ್ನು ಉಳಿಸಬೇಕು ಇದರಿಂದ ನಮ್ಮ ಮುಂದಿನ ಪೀಳಿಗೆಗೆ ಇತಿಹಾಸ ತಿಳಿದುಕೊಳ್ಳಲು ಅನುಕೂಲ ಆಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿರುವ ಸಿಂಧನೂರ ಸರಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಶಂಕರ್ ಗುರಿಕಾರ ಅವರು ಮಾತನಾಡುತ್ತಾ ಪರರ ವಿಚಾರಗಳನ್ನು, ಇನ್ನೊಬ್ಬರ ಆಚರಣೆಗಳನ್ನು ಗೌರವಿಸುವುದು ನಮ್ಮ ನಮ್ಮ ಪರಂಪರೆಯಾಗಿದೆ. ಸಂಸ್ಕೃತಿ ಮತ್ತು ನಾಗರೀಕತೆಯನ್ನು ಎಲ್ಲರೂ ತಿಳಿದುಕೊಳ್ಳಬೇಕು. ನಮ್ಮ ಪರಂಪರೆ ಬಹಳ ಪ್ರಾಚೀನ, ವೈವಿಧ್ಯತೆ ಮತ್ತು ಬಲಿಷ್ಠವಾದದ್ದು. ಭಾರತದ ನಾಗರಿಕತೆ ಸಿಂಧು ನಾಗರೀಕತೆಯಿಂದ ಪ್ರಾರಂಭವಾಗುತ್ತದೆ. ನೀವು ಬದುಕಿಗಾಗಿ ವಿದ್ಯಾಭ್ಯಾಸ ಮಾಡಿ. ಸಾಧನೆಗೆ ಪ್ರಯತ್ನ, ಬೇಕು, ವೈಜ್ಞಾನಿಕ ಮನೋಭಾವನೆ ಬೆಳಸಿಕೊಳ್ಳಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಮಾತನಾಡುತ್ತ ಈ ರೀತಿಯ ಪರಂಪರೆ ಕೂಟಗಳು ಕಾಲೇಜಿಗಳಲ್ಲಿ ನಡೆಯುವುದರಿಂದ ನಮ್ಮ ವಿದ್ಯಾರ್ಥಿನಿಯರಿಗೆ ಭಾರತೀಯ ಇತಿಹಾಸ, ಸಂಸ್ಕೃತಿ, ಭಾಷೆ, ವೈವಿಧ್ಯತೆಗಳ ತಿಳಿದುಕೊಳ್ಳಲು ಸಹಾಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೊಪ್ಪಳದ ಮಹಿಳಾ ವಸತಿ ನಿಲಯದ ವಾರ್ಡನ್ ಶ್ರೀ ಮತಿ ಗಿರಾಜ ಅವರು ಭಾರತೀಯ ಇತಿಹಾಸ ಪರಂಪರೆ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಧ್ಯಾಪಕಾರದ ಶ್ರೀ ಮತಿ ನಾಗರತ್ನ ತಮ್ಮಿನಾಳ, ಶ್ರೀ ವಿಠೋಬ, ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಹುಲಿಗೆಮ್ಮ, ಡಾ. ಮಲ್ಲಿಕಾರ್ಜುನ, ಡಾ. ಪ್ರದಿಪ್ ಕುಮಾರ್, ಡಾ. ನರಸಿಂಹ,ಡಾ. ಅಶೋಕ ಕುಮರ್, ಶ್ರೀ ಮತಿ ಸುಮಿತ್ರಾ, ಶ್ರೀ ಮತಿ ಸೌಮ್ಯ ಹಿರೇಮಠ ಮಲ್ಲಿಕಾರ್ಜುನ ಮಡಿವಾಳ ಹಾಗೂ ಕಾಲೇಜಿನ ಅತಿಥಿ ಉಪನ್ಯಾಸಕರಿದ್ದರು.
ಕಾರ್ಯಕ್ರಮದಲ್ಲಿ ಮಹೇಶ್ ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿದರು.
ಮಹಾದೇವಿ ಮತ್ತು ತಸ್ಲೀಮ್ ಪ್ರಾರ್ಥನೆ ಗೀತೆ ಹಾಡಿದರು. ಪವಿತ್ರ ಸ್ವಾಗತಿಸಿದರು.
ಕವಿತಾ ವಂದಿಸಿದರು.
ಪೂಜಾ ಮತ್ತು ಕವಿತಾ ನಿರೂಪಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ