ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇದಲಗಿಯಲ್ಲಿ
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಡೊಳ್ಳು, ಬಾಜಾ ಭಜಂತ್ರಿಗಳ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆಯಿಂದ ನಡೆಯಿತು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜೇರಟಗಿ ಶ್ರೀಗಳಾದ ಷ.ಬ್ರ.ಮಹಾಂತ ಶಿವಯೋಗಿಗಳು ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆರ್ಶಿವಚನ ನೀಡಿದರು,ಹಾಗು ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಶ್ರೀ ಅಯ್ಯಣ್ಣ ಬಂದಳ್ಳಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಸುರೇಶ್ ಹಳ್ಳಿ, ಉಪಾಧ್ಯಕ್ಷರು,ಎಲ್ಲಾ ಸದಸ್ಯರು ಹಾಗೂ ಮುಖ್ಯ ಅತಿಥಿಗಳಾಗಿ ಊರಿನ ಗಣ್ಯರಾದ ಶೀ ಸಾಹೇಬ್ ಗೌಡ ಪಾಟೀಲ್ ,ರುದ್ರಗೌಡ ಪಾಟೀಲ್,ಯುವ ಮುಖಂಡರಾದ ಸುರೇಶ್ ಪಾಟೀಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಪರಶುರಾಮ ವಡ್ಡರ,ದುರ್ಗಪ್ಪ ವಡ್ಡರ, ಪರಸುರಾಮ ಮಾದರ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ತೇಲ್ಕರ್,ರಾಜ್ಯ ಪರಿಷತ್ ಸದಸ್ಯರಾದ ರುದ್ರಪ್ಪ ಚಟ್ನಳ್ಳಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ ದ್ಯಾಮಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಮರೆಪ್ಪ ಹೊಸಮನಿ, ಕಾರ್ಯದರ್ಶಿ ಚಂದ್ರಕಾಂತ ದೇವರಮನಿ ಹಾಗೂ ಇತರೆ ಎಲ್ಲಾ ಸಂಘದ ಪದಾಧಿಕಾರಿಗಳು,ಜೇರಟಗಿ ಕ್ಲಸ್ಟರ್ ನ ಎಲ್ಲಾ ಶಾಲೆಯ ಮುಖ್ಯ ಗುರುಗಳು,ಸಹ ಶಿಕ್ಷಕರು ಭಾಗವಹಿಸಿದ್ದರು ಹಾಗೂ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾದ ಗುರುಪಾದ ಮಾಹೂರ ಹಾಗೂ ಶ್ರೀ ಮಹಾಂತೇಶ ಎನ್ ಪಾಟೀಲ ಸ.ಶಿ ರಂಜಣಗಿ ಉಪಸ್ಥಿತರಿದ್ದು ಸ್ವಾಗತಿಸಿದರು.ಶ್ರೀ ಮಹಾಂತಗೌಡ ಪಾಟೀಲ್ ಕಾರ್ಯಕ್ರಮ ನಿರೂಪಿಸಿ,ಶ್ರೀ ಲಾಲಸಾಬ ದೊಡಮನಿ ವಂದಿಸಿದರು.

ವರದಿ: ಚಂದ್ರಶೇಖರ ಪಾಟೀಲ್(ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ