ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೀಲಮ್ಮನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಪಾವಗಡ: ವಿದ್ಯಾರ್ಥಿಗಳಲ್ಲಿರುವ ವಿಶೇಷವಾದ ಪ್ರತಿಭೆಗಳನ್ನು ಗುರುತಿಸಿ ಹೊರ ತರಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉಪಯುಕ್ತವಾಗುತ್ತದೆ ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆ, ಭಾಷಣ, ಚರ್ಚಾ ಹಾಗೂ ವಿವಿಧ ರೀತಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಕೆ.ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು.
ಮೀನಕುಂಟನಹಳ್ಳಿ ಗ್ರಾಮದಲ್ಲಿ ಶಾಲೆಯ ಆವರಣದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ನಾಗಮಣಿ ಎಂ ಕೆ ನಾರಾಯಣಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಕ್ರೀಡಾ ಸ್ಪರ್ಧೆಗಳು, ಮನರಂಜನೆ ಮತ್ತು ಮಾನವೀಯ, ನೈತಿಕ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳ ಜೊತೆ ರಂಗೋಲಿ ಸ್ಪರ್ಧೆ,ನೃತ್ಯ ಪ್ರದರ್ಶನ,ಬೀದಿ ನಾಟಕ, ಗ್ರಾಮದೇವತೆ ವಿವಿಧ ಪ್ರತಿಭೆಗಳಿಗೆ ಬಹುಮಾನವನ್ನು ಕೊಟ್ಟು ಅಭಿನಂದಿಸಿದರು.
ಈ ಕಾರ್ಯಕ್ರಮದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಆರ್.ಪೆದ್ದರೆಡ್ಡಿ,ಗ್ರಾ.ಪಂ ಅಧ್ಯಕ್ಷರಾದ ಸರಿತಾ ಬಾಬು, ಉಪಾಧ್ಯಕ್ಷರಾದ ಮುತ್ಯಾಲಕ್ಕ, ಗ್ರಾ.ಪಂ ಸದಸ್ಯರಾದ ನಾಗರಾಜು,ಅರುಣಾ, ಸುಬ್ಬರೆಡ್ಡಿ,ಮಾಜಿ ಸದಸ್ಯರಾದ ಶಿವಕುಮಾರ್,ನಾರಾಯಣಪ್ಪ,ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯಕುಮಾರ್,ಎಡಿಎಂಎಂ ಶಂಕರಪ್ಪ,ಬಿ.ಕೆ.ಹಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಓಂಕಾರಪ್ಪ, ಪ್ರಾ.ಶಾ.ಶಿ.ಸಂಘದ ಕಾರ್ಯದರ್ಶಿ ನಾಗೇಂದ್ರ, ಸಿಆರ್.ಪಿ ಚಂದ್ರಶೇಖರ್, ಬಿ ಆರ್ ಪಿ ಗೀತಾ ರಾಣಿ ಸಹ ಶಿಕ್ಷಕರಾದ ರಾಮಾಂಜನೇಯ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವರದಿ:ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ