ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರಿಗೆ ಮುಖ್ಯಮಂತ್ರಿ ಆಗಮಿಸುವ ಮೊದಲು ಮೂಲಭೂತ ಸೌಕರ್ಯ ಕಲ್ಪಿಸಿ:ಹೊನ್ನೂರು ಪ್ರಕಾಶ್

ಹನೂರು:ಜಿಲ್ಲೆಗೆ ಆಗಮಿಸುವ ಮೊದಲು ಕ್ಷೇತ್ರವ್ಯಾಪ್ತಿಯ ಮಾದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನ ಮುಖ್ಯಮಂತ್ರಿಗಳು ಆಲಿಸಿ ಬಗೆಹರಿಸಿ ನಂತರ ಅಭಿವೃದ್ಧಿ ಕಾಮಗಾರಿಗಳ ನಡೆಸಲಿ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯನ್ನೂದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆತರುತ್ತಿದ್ದು ಕೆಲವು ಗುದ್ದಲಿ ಪೂಜೆಗಳನ್ನು ಮಾಡಲು
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಚಾಮರಾಜನಗರ ಜಿಲ್ಲೆಗೆ ಆಗಮಿಸುತ್ತಿರುವುದು ಸಂತೋಷದ ವಿಷಯ,ಆದರೆ ಜಿಲ್ಲಾ ವ್ಯಾಪ್ತಿಯ ಬಿಳಿಗಿರಿ ರಂಗನ ಬೆಟ್ಟ, ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿನ ವಿವಿಧ ಪೋಡಿನ ಜನತೆಯ ಸಮಸ್ಯೆಗಳನ್ನು ಸಹ ಆಲಿಸಿ ಬಗೆಹರಿಸಬೇಕು ಎಂದರು ತಿಳಿಸಿದರು.

ಮಹದೇಶ್ವರ ಬೆಟ್ಟಕ್ಕೆ ಸಿಎಂ ಆಗಮಿಸಿದಾಗ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್  ಬಳಿ ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನು ಮನವಿ ನೀಡಲು ರೈತ ಮುಖಂಡರಿಗೆ ಅವಕಾಶ ಮಾಡಿಕೊಡಬೇಕು, ಮುಖ್ಯಮಂತ್ರಿಗಳು  ನಾಗಮಲೈ ಭವನದಲ್ಲಿ ನಡೆಯುವಂತಹ ಪ್ರಾಧಿಕಾರದ ಸಭೆಯಲ್ಲಿ ಸಮಸ್ಯೆಗಳು ಬಗೆಹರಿಸುವಂತೆ ಒತ್ತಾಯ ಮಾಡಿದರು.

ಹಾಗೂ ಚಂಗಡಿ ಗ್ರಾಮಸ್ಥರ ಸ್ಥಳಾಂತರಕ್ಕೆ ಸಮಯ ವ್ಯರ್ಥಮಾಡುತ್ತಿದ್ದು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಗುಂಡೇಗಾಲ ಬಸವಣ್ಣ, ಪಾಳ್ಯ ಶಿವಮೂರ್ತಿ, ಚಂಗಡಿ ಕರಿಯಪ್ಪ, ಮಲೆ ಮಾದೇಶ್ವರ ಬೆಟ್ಟದ ಪ್ರಸಾದ್ ಇನ್ನೂ ಮುಂತಾದವರು ಹಾಜರಿದ್ದರು .
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ