ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ಸರಕಾರ ನೇಮಕಾತಿ ಮಾಡಿಕೊಳ್ಳಲಿ:ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ದೇವರಾಜ್ ಸುರಪುರ ಸರಕಾರಕ್ಕೆ ಆಗ್ರಹ

ಕಲಬುರಗಿ:ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ,ವಸತಿ ಶಾಲೆ, ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕರಾಟೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ಸರಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ ಯಾಕೆಂದರೆ 2013ರಲ್ಲಿ ನಿರ್ಭಯ ಅತ್ಯಾಚಾರ ಪ್ರಕರಣದ ಬಳಿಕ ಸರ್ಕಾರದಿಂದ ಈ ಯೋಜನೆಯನ್ನು 2017ರವರೆಗೆ ವಿಸ್ತರಿಸಲಾಯಿತು ಅನುದಾನದ ಕೊರತೆಯಿಂದಾಗಿ 2021ರಿಂದ 2022-23ರ ವರೆಗೆ ಮತ್ತೆ ಈ ಯೋಜನೆಗೆ ಚಾಲನೆ ನೀಡಲಾಯಿತು ಆದರೆ ಈ ಬಾರಿಯ 2024 -25ಸಾಲಿನಲಿ ಅನುದಾನದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಅದೇ ರೀತಿಯಾಗಿ ರಾಜ್ಯದ ಶಾಲಾ ಕಾಲೇಜಿನ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 2024-25ರ ಸಾಲಿನ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಕರಾಟೆ ಶಿಕ್ಷಕರಿಗೋಸ್ಕರ ಪ್ರತ್ಯೇಕವಾದ ಅನುದಾನ ಬಿಡುಗಡೆಗೊಳಿಸಿ ಕ್ರಾಂತಿಕಾರಕ ನಿರ್ಧಾರಕ್ಕೆ ಇಂದಿನ ರಾಜ್ಯ ಸರ್ಕಾರ ಪಣತೊಡಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ರಾಜ್ಯದ ಶಿಕ್ಷಣ ಸಚಿವರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಅತಿ ಶೀಘ್ರದಲ್ಲಿ ಕರಾಟೆ ಶಿಕ್ಷಕರ ಅನುದಾನ ಬಿಡುಗಡೆಗೊಳಿಸಬೇಕು. ಅದೇ ರೀತಿಯಾಗಿ ಸಮಾಜ ಇಲಾಖೆಯ ಆದೇಶದಂತೆ ಪ್ರತಿಯೊಂದು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿದಾರರು ವಸತಿ ಶಾಲೆಗಳಲ್ಲಿ ರಾಜ್ಯದಾದ್ಯಂತ ತರಬೇತಿ ನೀಡಿದ್ದಾರೆ ಆದಕಾರಣ 2023ರ ಕರಾಟೆ ಶಿಕ್ಷಕರ ಅನುದಾನ ಸ್ಥಗಿತಗೊಂಡಿದ್ದು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕರಾಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ