ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶೈಕ್ಷಣಿಕ ಅಧಿಕಾರಿಗಳ ಮಾತು ಲೆಕ್ಕಿಸದೆ ಖಾಸಗಿ ಶಿಕ್ಷಕರಿಗೆ ರಜಾ ಕೊಡದೆ ಖಾಸಗಿ ಸಂಸ್ಥೆಗಳ ದರ್ಬಾರ್

ಪಾವಗಡ : ಶಿಕ್ಷಕರ ದಿನಾಚರಣೆಯಂದು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲೆಯನ್ನು ನಡೆಸಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ದೇಶದಾದ್ಯಂತ ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ,
ಸರ್ವೆಪಲ್ಲಿ ರಾಧಾಕೃಷ್ಣನ್ ರವರ 137ನೇ ಜಯಂತಿ ಆಚರಿಸುತ್ತಿದ್ದು , ಕೆಲ ಶಾಲೆಗಳು ಮಾತ್ರ ಶಾಲೆಗೆ ರಜೆ ಬಿಡದೆ ಖಾಸಗಿ ಶಿಕ್ಷಕರನ್ನು ಶಿಕ್ಷಕರ ದಿನಾಚರಣೆಗೆ ಬರದಂತೆ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಿಕ್ಷಕರ ದಿನಾಚರಣೆಯಂದು ತಾಲ್ಲೂಕಿನ ಖಾಸಗಿ ಶಾಲೆಗಳು ದರ್ಬಾರ್ ನಡೆಸುತ್ತಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆ ಬುಧವಾರವೇ ಎಲ್ಲಾ ಶಾಲೆಗಳಿಗೂ ಆಹ್ವಾನ ಪತ್ರಿಕೆ ನೀಡಿ, ಗುರುವಾರ ಶಿಕ್ಷಣ ದಿನಾಚರಣೆ ಪ್ರಯುಕ್ತ ಶಾಲೆಗಳಿಗೆ ರಜೆ ಘೋಷಿಸಿ ಸರ್ಕಾರಿ ಅನುದಾನಿತ ಖಾಸಗಿಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳನ್ನು ಕಡ್ಡಾಯವಾಗಿ ಎಸ್ ಎಸ್ ಕೆ ರಂಗ ಮಂದಿರಕ್ಕೆ ಹಾಜರಾಗುವಂತೆ ಆದೇಶ ಮಾಡಿದ್ದರು.

ಆದರೆ ಇದಕ್ಕೆ ವಿಭಿನ್ನವಾಗಿ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಓ ಆದೇಶಕ್ಕೆ ಸೆಡ್ಡು ಹೊಡೆದು ಶಾಲೆಗಳನ್ನು ನಡೆಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಖಾಸಗಿ ಶಾಲೆಗಳ ಈ ನಡೆಯಿಂದಾಗಿ ಖಾಸಗಿ ಶಾಲೆಗಳ ನಿಯಂತ್ರಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲಿ ಇವೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ.?
ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳಿಗೆ ಒಂದು ನಿಯಮ ಖಾಸಗಿ ಶಾಲೆಗಳಿಗೆ ಒಂದು ನಿಯಮವಿದೆಯೇ ಎಂಬುದು ಚರ್ಚೆಯ ಅಂಶವಾಗಿದೆ.
ತಾಲ್ಲೂಕಿನ ಕೆಲ ಖಾಸಗಿ ಶಾಲೆಗಳು ದೈಹಿಕ ಶಿಕ್ಷಣದ ಬಗ್ಗೆ ನಿರ್ಲಕ್ಷ ತೋರಿ ಶನಿವಾರ ಪೂರ್ಣ ತರಗತಿಗಳನ್ನು ನಡೆಸುತ್ತಿರುವುದು ಈ ಹಿಂದೆ ಕೆಲ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ಈಗಲೂ ಸಹ ಕೆಲ ಶಾಲೆಗಳು ಶನಿವಾರ ಪೂರ್ಣ ಪ್ರಮಾಣದ ಶಾಲೆಗಳನ್ನು ನಡೆಸುತ್ತಿದ್ದು, ತಾಲ್ಲೂಕಿನಲ್ಲಿ
ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಂಗೂ ಲಗಾಮಿ ಇಲ್ಲವೇ ಎಂಬುದು ಚರ್ಚೆಯ ಅಂಶವಾಗಿದೆ.
ಈಗಲಾದರೂ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳು ಗಮನಹರಿಸಿ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಬೇಕೆಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ