ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳು

ಶಿವಮೊಗ್ಗ : ಪ್ರಸ್ತುತ ಹೆಚ್ಚು ಮಳೆ, ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆಧ್ರತೆ (ಶೇ. 90 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಿರುವುದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ.ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಅವರು ಮಾಹಿತಿ ನೀಡಿರುತ್ತಾರೆ.
ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು. ಕೊಳೆಬಾಧಿತ ಬಿದ್ದಂತಹ ಕಾಯಿಗಳನ್ನು ಆರಿಸಿ ಹೊರಗಡೆ ಹಾಕಬೇಕು. ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಹಾಗೂ ತೋಟದ ಅಂಚಿನ ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು. ವೈಜ್ಞಾನಿಕವಾಗಿ ತಯಾರಿಸಿದ ರಸಸಾರ (pH) 7ರ ಶೇ.1 ರ ಬೋರ್ಡೋದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ.0.2 ರ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ. 0.1 ರ ಮ್ಯಾಂಡಿಪ್ರ‍್ರೇಪಮಿಡ್ (1 ಮಿ.ಲಿ ಪ್ರತಿ ಲೀ. ನೀರಿನಲ್ಲಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆಗಳಿಗೆ ಮತ್ತು ಸುಳಿಭಾಗಕ್ಕೆ ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊAದಿಗೆ (ರಾಳ) ಸಿಂಪರಣೆ ಮಾಡಿ. ಹೀಗೆ ಮಾಡುವುದರಿಂದ ಕೊಳೆರೋಗದ ಜೊತೆಗೆ ಎಲೆಚುಕ್ಕೆ ರೋಗವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ.

ವರದಿ : ಕೊಡಕ್ಕಲ್ ಶಿವಪ್ರಸಾದ್ ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ