ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಶಾಸಕ ಡಾ.ಅಜಯ್ ಸಿಂಗ್ ಅವರು ಪರಿಹಾರ ಧನ ವಿತರಣೆ ಮಾಡಲಿ:ಜೆಟ್ಟಪ್ಪ ಪೂಜಾರಿ ಆಗ್ರಹ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ (55) ಸಾಲ ಭಾದೆಯಿಂದ ತಮ್ಮ ಸ್ವಂತ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಹತ್ತು ದಿವಸವಾದರೂ ಸಹಿತ ತಾಲೂಕಿನ ಮತಕ್ಷೇತ್ರದ ಶಾಸಕರು (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಕುಟುಂಬಸ್ಥರಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿ ಪರಿಹಾರ ಧನ ವಿತರಣೆ ಮಾಡಬೇಕಾಗಿತ್ತು.ಆದರೆ ಇದುವರೆಗೆ ತಮ್ಮದೇ ಮತಕ್ಷೇತ್ರದ ರೈತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹಲವಾರು ಪತ್ರಿಕೆಯಲ್ಲಿ ಪ್ರಕಟಣೆ ಆದರೂ ಸಹಿತ ಭೇಟಿ ನೀಡದಿರುವುದಕ್ಕೆ ಶಾಸಕರ ವಿರುದ್ಧ ಗ್ರಾಮದ ನಿವಾಸಿಯಾದ ಜಟ್ಟಪ್ಪ ಎಸ್ ಹಿರೇ ಪೂಜಾರಿ ಅವರು ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶವನ್ನು ಹೊರ ಹಾಕಿದ್ದಾರೆ ತಮ್ಮದೇ ಮತಕ್ಷೇತ್ರದ ಸಾಮಾನ್ಯ ರೈತ ಮಲ್ಲಪ್ಪ ಕಂಬಳಿ ಅವರು ತಮಗೆ ಮತನೀಡಿ ಆಯ್ಕೆ ಮಾಡಿ ಕಳಿಸಿದ್ದಾರೆ ಶಾಸಕರು ಇದನ್ನು ಪರಿಗಣಿಸಬೇಕು ಇಂತಹ ಸಂದರ್ಭದಲ್ಲಿ ತಾಲೂಕಿನ ಶಾಸಕರಾದ ಡಾ. ಅಜಯಸಿಂಗ್ ಅವರು ಕೂಡಲೇ ಮೃತ ರೈತನ ಕುಟುಂಬಸ್ಥರಿಗೆ ಭೇಟಿಯಾಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರ ಧನ ನೀಡಬೇಕೆಂದು ಜೆಟ್ಟಪ್ಪ ಎಸ್ ಹಿರೇ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ