ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೆಪ್ಟೆಂಬರ್ ೧೭ ರಂದು ಅನಂತ ಚತುರ್ದಶಿ ವ್ರತ,ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ!

ಭಾದ್ರಪದ ಶುಕ್ಲ ಪಕ್ಷ ಚತುರ್ದಶಿಯಂದು ಅನಂತ ಚತುರ್ದಶಿ ವ್ರತವನ್ನು ಆಚರಿಸಲಾಗುತ್ತದೆ. ಇದರ ಅವಧಿ ಹದಿನಾಲ್ಕು ವರ್ಷಗಳು. ನಂತರ ವ್ರತದ ಉದ್ಯಾಪನೆ ಮಾಡಲಾಗುತ್ತದೆ. ಈ ವ್ರತವನ್ನು ಯಾರಾದಾರೂ ಮಾಡಲು ಸೂಚಿಸಿದರೆ ಅಥವಾ ಅನಂತ ವ್ರತದ ದಾರ ದೊರೆತರ ಮಾಡುತ್ತಾರೆ.

ಅನಂತ ಚತುರ್ದಶಿಯಲ್ಲಿ ಬರುವ ‘ಅನಂತ’ದ ಅರ್ಥವೆಂದರೆ ಅನಾದಿ ಅನಂತ ರೂಪದಲ್ಲಿರುವ, ಎಂದೂ ಕಡಿಮೆಯಾಗದ ಚೈತನ್ಯ ರೂಪದಲ್ಲಿರುವ ಶಕ್ತಿ.

ಅನಂತ ಚತುರ್ದಶಿ ವ್ರತ ದಾರ ಅನಂತ ಚತುರ್ದಶಿ ವ್ರತದ ಒಂದು ಕ್ಷಣ ಅನಂತ ಚತುರ್ದಶಿ ವ್ರತದ ಉದ್ದೇಶ ಲೌಕಿಕ ಇಚ್ಛೆ ಆಕಾಂಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ಅನಂತ ಚತುರ್ದಶಿ ವ್ರತವನ್ನು ಆಚರಿಸಲಾಗುತ್ತದೆ (ಅಂದರೆ ಇದೊಂದು ‘ಕಾಮ್ಯ ವ್ರತ’ವಾಗಿದೆ). ಮುಖ್ಯವಾಗಿ ಕಳೆದುಹೋದ ಸಮೃದ್ಧಿಯನ್ನು (ಗತವೈಭವವನ್ನು) ಮರಳಿ ಪಡೆಯಲು ಈ ವ್ರತವನ್ನು ಆಚರಿಸಲಾಗುತ್ತದೆ.

ಅನಂತ ಚತುರ್ದಶಿಯ ದಿನ, ಬ್ರಹ್ಮಾಂಡದಲ್ಲಿ ಶ್ರೀ ವಿಷ್ಣುವಿನ ಲಹರಿಗಳು ಸಕ್ರಿಯವಾಗಿರುತ್ತವೆ.
ಈ ದಿನ ಸಾಮಾನ್ಯ ಜನರಿಗೂ ಕೂಡ ಈ ಲಹರಿಗಳನ್ನು ಆಕರ್ಷಿಸಲು ಮತ್ತು ಗ್ರಹಿಸಲು ಸುಲಭವಿರುತ್ತದೆ. ಅನಂತಪೂಜೆ ಮಾಡುವುದು ಎಂದರೆ ಶ್ರೀ ವಿಷ್ಣುವಿನ ಕ್ರಿಯಾಶಕ್ತಿಯನ್ನು ಗ್ರಹಿಸಿಕೊಳ್ಳುವುದು.

ಸಾಮಾನ್ಯ ಭಕ್ತರು ಶ್ರೀ ವಿಷ್ಣುತತ್ತ್ವದ ಉನ್ನತ ಲಹರಿಗಳನ್ನು ಗ್ರಹಿಸಲು ಸಾಧ್ಯವಿಲ್ಲದ ಕಾರಣ, ಹಿಂದೂ ಧರ್ಮದಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ, ಕನಿಷ್ಠ ಪಕ್ಷ ಈ ಲಹರಿಗಳಿಂದಾದರೂ ಲಾಭವಾಗಲಿ ಎಂದು ಅನಂತ ಚತುರ್ದಶಿ ವ್ರತವನ್ನು ಹೇಳಲಾಗಿದೆ.

ಅನಂತ ವ್ರತದ ಪ್ರಧಾನ ದೇವರು ಅನಂತ, ಅಂದರೆ ಭಗವಾನ ಶ್ರೀ ವಿಷ್ಣು. ಯಮುನಾ ಮತ್ತು ಶೇಷನಾಗ ದೇವತೆಗಳು ಈ ಪೂಜೆಯ ಗೌಣ ದೇವತೆಗಳಾಗಿರುತ್ತಾರೆ.

ಅನಂತ ಚತುರ್ದಶಿ ವ್ರತ ಪೂಜೆ ಸಾಧ್ಯವಾದಷ್ಟು ಅನಂತನ ವ್ರತದ ಪೂಜೆಯನ್ನು ದಂಪತಿಗಳು ನಡೆಸಬೇಕು. ಅಸಾಧಾರಣ ಸನ್ನಿವೇಷಗಳಲ್ಲಿ ಪುರುಷ ಅಥವಾ ಮಹಿಳೆ ಒಬ್ಬರೇ ಪೂಜೆಯನ್ನು ಮಾಡಬಹುದು. ಪೂಜೆಯನ್ನು ಹೇಗೆ ನಡೆಸಬೇಕು ಎಂದು ಸಂಕ್ಷಿಪ್ತವಾಗಿ ಇಲ್ಲಿ ನೀಡಲಾಗಿದೆ ? ವ್ರತದ ಪೂಜೆಯನ್ನು ಪ್ರಾರಂಭಿಸುವ ಮೊದಲು, ಕಳೆದುಹೋದ ಸಮೃದ್ಧಿಯನ್ನು ಮರಳಿ ಪಡೆಯಲು ಈ ಪೂಜೆಯನ್ನು ಮಾಡುವ ಸಂಕಲ್ಪವನ್ನು ಮಾಡಲಾಗುತ್ತದೆ. ನಂತರ, ಯಮುನಾಪೂಜೆಯಲ್ಲಿ ಶಾಸ್ತ್ರೋಕ್ತವಾಗಿ ಶ್ರೀ ಯಮುನಾ ದೇವಿಯ ಷೋಡಶೋಪಚಾರ ಪೂಜೆ ನಡೆಸಲಾಗುತ್ತದೆ.

ಅನಂತ ಚತುರ್ದಶಿ ವ್ರತದ ಆಚರಣೆಯ ಸಮಯದಲ್ಲಿ ನೀರಿನ ಕಳಶದಲ್ಲಿ ಯಮುನೆಯನ್ನು ಆಹ್ವಾನಿಸುವುದರಿಂದ ನಡೆಯುವ ಸೂಕ್ಷ್ಮ ಪ್ರಕ್ರಿಯೆ ಯಮುನೆಯನ್ನು ಆಹ್ವಾನಿಸುವ ಮೂಲಕ, ನೀರಿನಲ್ಲಿ ಶ್ರೀಕೃಷ್ಣನ ಲಹರಿಗಳು ಜಾಗೃತಗೊಳ್ಳುತ್ತವೆ.ಈ ಲಹರಿಗಳನ್ನು ಪೂಜಕನು ಪಡೆಯುತ್ತಾನೆ ಮತ್ತು ಪೂಜಕನ ದೇಹದಲ್ಲಿರುವ ಕಪ್ಪು, ಸುರುಳಿಯಾಕಾರದ ರಜ-ತಮದ ಪ್ರಾಬಲ್ಯವಿರುವ ಲಹರಿಗಳು ನಾಶವಾಗುತ್ತವೆ. ಇದರೊಂದಿಗೆ, ಪೂಜಕನ ದೇಹವು ಶುದ್ಧವಾಗುತ್ತದೆ. ಶುದ್ಧವಾದ ಶರೀರದಿಂದ ಮಾಡಿದ ಮುಂದಿನ ಪೂಜೆಯು ಹೆಚ್ಚಿನ ಲಾಭವನ್ನು ನೀಡುತ್ತದೆ.

ಶೇಷನಾಗನ ಪೂಜೆ

ಶೇಷನಾಗನ ವಿರಾಜಮಾನನಾಗಿರುವ ಲಕ್ಷ್ಮಿದೇವಿ ಸಹಿತ ಶ್ರೀ ವಿಷ್ಣು ಇದರಲ್ಲಿ ದರ್ಭೆಯಿಂದ ಮಾಡಿದ ಏಳು ಹೆಡೆಗಳ ನಾಗರಹಾವನ್ನು ಶೇಷನಾಗನ ಸಂಕೇತವಾಗಿ ತಯಾರಿಸಿ ಅದರ ಶಾಸ್ತ್ರೋಕ್ತ ಪೂಜೆ ನಡೆಸಲಾಗುತ್ತದೆ. ಮೊದಲು ಶೇಷನಾಗನನ್ನು ಆಹ್ವಾನಿಸಲಾಗುತ್ತದೆ. ಶೇಷನಾಗನಿಗೆ ಆಸನವನ್ನು ನೀಡಿ ನಂತರ, ಪಾದ್ಯಪೂಜೆ, ಅರ್ಘ್ಯ ಅರ್ಪಿಸಲಾಗುತ್ತದೆ. ಶೇಷನಾಗನ ಅಂಗ-ಪೂಜೆ ಮಾಡಲಾಗುತ್ತದೆ. ಶೇಷನಾಗನ ಏಳು ಹೆಡೆಳನ್ನು ಪೂಜಿಸಲಾಗುತ್ತದೆ. ನಂತರ ಶೇಷನಾಗನ ನಾಮಪೂಜೆ ಮಾಡಲಾಗುತ್ತದೆ. ಕೊನೆಯಲ್ಲಿ ಧೂಪ, ದೀಪ, ನೈವೇದ್ಯ ಇತ್ಯಾದಿ ಅರ್ಪಿಸಿ ಪೂಜೆಯನ್ನು ಮುಕ್ತಾಯಗೊಳಿಸಲಾಗುತ್ತದೆ.

ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ, ಹಬ್ಬ-ಉತ್ಸವ-ವ್ರತಗಳು.
ಸಂಗ್ರಹ : ಶ್ರೀ ವಿನೋದ ಕಾಮತ್ ರಾಜ್ಯ ವಕ್ತಾರರು, ಸನಾತನ ಸಂಸ್ಥೆ.

ಸಂಪರ್ಕ :೯೩೪೨೫ ೯೯೨೯೯

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ