ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಕರು ಗುಣಮಟ್ಟ ಕಾಯ್ದುಕೊಳ್ಳಬೇಕು: ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯ

ಉತ್ತರ ಕನ್ನಡ/ ಮುಂಡಗೋಡ: ಸರ್ಕಾರಿ ಪ್ರೌಢ ಶಾಲೆ ಮುಂಡಗೋಡದಲ್ಲಿ ಹತ್ತನೆಯ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಕಿರು ಪರೀಕ್ಷೆಗಳಲ್ಲಿ ಯಾವ ಯಾವ ವಿಷಯಗಳಲ್ಲಿ ಎಷ್ಟು ಅಂಕ ಪಡೆದಿದ್ದಾರೆ ಎಂಬುದರ ಕುರಿತು ಮುಖ್ಯೋಪಾಧ್ಯಾಯರಿಂದ ಸಮಗ್ರ ಮಾಹಿತಿ ಪಡೆದ ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯ ಅವರು ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಶಿಕ್ಷಕರು ಮಕ್ಕಳಿಗೆ ಭೋದಿಸುವ ವೇಳೆ ಗುಣಮಟ್ಟಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮುಂಡಗೋಡಕ್ಕೆ ಭೇಟಿ ನೀಡಿದ ಅವರು ಮಕ್ಕಳೊಂದಿಗೆ ಬೆರೆತು ಶಾಲೆಯಲ್ಲಿ ಯಾವುದೇ ರೀತಿಯ ಕುಂದು ಕೊರತೆಗಳಿದ್ದರೆ ತಿಳಿಸಿ, ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದರ ಕುರಿತು ಮಕ್ಕಳಿಂದಲೇ ಮಾಹಿತಿ ಪಡೆದರು.

ಬಳಿಕ ಅಕ್ಷರದಾಸೋಹದ ಬಿಸಿಯೂಟದ ಅಡುಗೆ ಮನೆ ತೆರಳಿ ಅಡುಗೆ ಮಾಡುವವರಿಂದ ಮಾಹಿತಿ ಪಡೆದರು.ಇದೇ ವೇಳೆ ಅಕ್ಕಿ ,ಬೇಳೆ,ತರಕಾರಿ ಗುಣಮಟ್ಟ ಪರೀಕ್ಷಿಸಿದರು.
ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ಕುಂದು ಕೊರತೆಗಳನ್ನು ಮತ್ತು ಆಸ್ಪತ್ರೆಯಲ್ಲಿ ಲಭ್ಯ ಸೌಲಭ್ಯಗಳ ಪರಿಶೀಲನೆ ನಡೆಸಿದರು,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಯ ಪೋಷಣ ಮಾಸಾಚರಣೆ ಪಾಲ್ಗೊಂಡು ಅಧಿಕಾರಿಗಳಿಂದ ಮಾಹಿತಿ ಪಡೆದರು ಬಳಿಕ ಹಳೂರು ನಂಬರ್ 2 ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾದ ಕಾವ್ಯರಾಣಿ, ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾ ಅಧಿಕಾರಿ ಟಿ ವಾಯ ದಾಸನಕೊಪ್ಪ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಚಂದ್ರಶೇಖರ್, ಬಿಇಒ ಜಕಣಾಚಾರಿ,ಕಂದಾಯ ಸಿಬ್ಬಂದಿಗಳು ಸೇರಿದಂತೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ