ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ

ವಿಜಯನಗರ ಜಿಲ್ಲೆ ಕೊಟ್ಟೂರು:(ಹೊಸಪೇಟೆ)ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ದಿನಾಂಕ 25/09/2024 ಬುಧವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ಕಾಂತರಾಜು ಡಿ ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಯ ಉತ್ತರ ಕರ್ನಾಟಕ ವಿಭಾಗದ ಸಂಯೋಜರಾದ ಶ್ರೀಯುತ ಶರಣಪ್ಪ ಕಟ್ಟಿಮನಿ ಹಾಗೂ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ರಂಜನಿ ಬೆಂಗಳೂರು ,ಇವರು ಉದ್ಘಾಟನೆ ಮಾಡಿದರು.

ಶಿಬಿರಾರ್ಥಿಗಳಿಗೆ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮವನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ ಕುರಿತು ಹಾಗೂ ಲೈಬ್ರರಿಯನ್ ಪೋರ್ಟಲ್ ನಲ್ಲಿ ಸ್ವಸಹಾಯ ಸಂಘದ ಸದಸ್ಯರನ್ನು ನೊಂದಣಿ ಮಾಡುವ ಕುರಿತು ಮಾಹಿತಿ ನೀಡಲಾಯಿತು ಮತ್ತು ತರಬೇತಿಯಲ್ಲಿ ವಿನೂತನ ಚಟುವಟಿಕೆಗಳಲ್ಲಿ ಶಿಬಿರಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವುದರ ಮೂಲಕ ತರಬೇತಿಯು ಸಂಪೂರ್ಣ ಹಾಜರಾತಿಯೊಂದಿಗೆ ಯಶಸ್ವಿಯಾಗಿ ನಡೆಯಿತು.ತರಬೇತಿಯಲ್ಲಿ ಜಿಲ್ಲಾ ಸಂಯೋಜಕರಾದ ಎಸ್.ಬಿ ಶ್ರೀಧರ್ ಹಾಗೂ ಬಸವರಾಜು ಬಿ.ಎ.ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ