ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯೋಜನೆ ಅಧಿಕಾರಿಗಳು ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಹಠಾತ್ ದಾಳಿ:ಕೂಲಿ ಕೆಲಸಕ್ಕೆ ಹೋಗುತ್ತಿರುವ ಮಕ್ಕಳಿಗೆ ರಕ್ಷಣೆ ಮಾಡಿದ ಅಧಿಕಾರಿಗಳು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣ ಮಾರ್ಗ ಮಧ್ಯೆ ಮಕ್ಕಳಿಗೆ ಶಾಲೆ ಬಿಡಿಸಿ ಆಟೋದಲ್ಲಿ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಸಹಾಯವಾಣಿ ೧೦೯೮ ರವರ ಸಹಯೋಗದೊಂದಿಗೆ ಖಚಿತ ಮಾಹಿತಿ ಆಧಾರದ ಮೇಲೆ ಕಲಂ ೧೬ ಮತ್ತು ೧೭ ಅಡಿಯಲ್ಲಿ ಬಂದ ಅಧಿಕಾರಿಗಳು ತಂಡದಿಂದ ಮಕ್ಕಳಿಗೆ ರಕ್ಷಣೆ ಮಾಡಲಾಯಿತು.
ರಕ್ಷಣೆ ಮಾಡಿದ ಕಾರ್ಮಿಕ ಇಲಾಖೆ ಯಾದಗಿರಿ,ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ ಮಕ್ಕಳು ಮತ್ತು ಪಾಲಕ/ಪೋಷಕರಿಂದ ಈ ಮಕ್ಕಳಿಗೆ ಇನ್ನೂ ಮುಂದೆ ಯಾವುದೇ ಕಾರಣಕ್ಕೂ ಕೂಲಿ ಕೆಲಸ ಮತ್ತು ದುಡಿಯುವುದ್ದಕೆ ಹಚ್ಚುವುದಿಲ್ಲ ಎಂದು ಹೇಳಿದರು ಪ್ರತಿ ದಿನ ನಾವು ಶಾಲೆಗೆ ಹೋಗುವಂತೆ ಮತ್ತು ಶಾಲೆ ಬಿಡಿಸದಂತೆ ನೋಡಿಕೊಳ್ಳುತ್ತೆವೆ ಎಂದು ದೃಢೀಕರಣ ಪತ್ರ ಬರೆಸಿಕೊಂಡು ರಕ್ಷಣೆ ಮಾಡಿದ ಮಕ್ಕಳಿಗೆ ಅವರ ಪಾಲಕರಿಗೆ ಒಪ್ಪಿಸಲಾಯಿತು ಬಾಲ ಕಾರ್ಮಿಕ ಹಾಗೂ ಕಿಶೋರ್ ಕಾರ್ಮಿಕರ ಪದ್ಧತಿ ವಿರುದ್ಧ ಗ್ರಾಮದ ಪೋಷಕರಿಗೆ ಜಾಗೃತಿ ಮೂಡಿಸಲಾಯಿತು.
ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳಾದ ಪಿ.ಎಸ್.ಐ ಹಣಮಂತ ಬಂಕಳಗಿ, ಬಾಲ ಕಾರ್ಮಿಕರ ಯೋಜನೆ ಅಧಿಕಾರಿ ರಿಯಾಜ್ ಪಟೇಲ್, ಮಕ್ಕಳ ರಕ್ಷಣಾ ಘಟಕ ಅಧಿಕಾರಿ ರಾಜೇಂದ್ರ ಯಾದವ್, ಸಿ.ಆರ್.ಪಿ ಶಿಕ್ಷಣ ಇಲಾಖೆ ಈರಯ್ಯ ಹಿರೇಮಠ ಕೆಂಭಾವಿ, ಮಲ್ಲಪ್ಪ ಮಾನೆಗರ್ ಮಕ್ಕಳ ಸಹಾಯವಾಣಿ ೧೦೯೮ ಎಲ್ಲಾ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಸಹ ಶಿಕ್ಷಕರು ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ