ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸರ್ಕಾರದಿಂದ ಸೇವಾ ಭತ್ಯೆ ನೀಡುವಂತೆ ಶಾಸಕರಿಗೆ ಮನವಿ


ಕೊಪ್ಪಳ/ಕಾರಟಗಿ:ಅಖಂಡ ಗಂಗಾವತಿ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬ್ಯಾಂಕುಗಳ ಕ್ಷೇಮಾಭಿವೃದ್ಧಿ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯದರ್ಶಿಗಳು ಹಲವು ವರ್ಷಗಳಿಂದ ವರ್ಷಗಳಿಂದ ರೈತರ ಸಹಕಾರ ಸಂಘದಲ್ಲಿ ಸೇವೆ ಒದಗಿಸುತ್ತಾ ಬಂದಿದ್ದು, ಸರಕಾರದಿಂದ ಯಾವುದೇ ಸೇವಾ ಭದ್ರತೆ ಒದಗಿಸಿಲ್ಲ ಅಲ್ಲದೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ಸಾಗಿಸುವುದು ಕಷ್ಟಕರವಾಗಿದೆ ಆದ್ದರಿಂದ ನಮ್ಮ ಸೇವೆಯನ್ನ ಗುರುತಿಸಿ ಸರ್ಕಾರ ಸೇವ ಭತ್ಯೆ ಮತ್ತು ಇನ್ನುಳಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮತ್ತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಿ ಸರಕಾರದ ಗಮನಕ್ಕೆ ತಂದು ಸೌಲಭ್ಯವನ್ನು ಒದಗಿಸಬೇಕೆಂದು ಕನಕಗಿರಿ ಶಾಸಕರಾದ ಬಸವರಾಜ ದಡೆಸೂಗುರು ಇವರಿಗೆ ಮನವಿ ಸಲ್ಲಿಸಿದರು ನಂತರ ಶಾಸಕ ಬಸವರಾಜ್ ದಡೆಸುಗೂರು ಮಾತನಾಡಿ ಪ್ರಾಮಾಣಿಕವಾಗಿ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗನೆ ನಿಮಗೆ ಸರ್ಕಾರದ ಸೌಲಭ್ಯ ದೊರಗಿಸಿಕೊಡುತ್ತೇನೆ ಎಂದರು ಸಂದರ್ಭದಲ್ಲಿ ಅಖಂಡ ಗಂಗಾವತಿ ತಾಲೂಕು ಕೃಷಿ ಪತ್ತಿನ ಸಹಕಾರದ ಸಂಘದ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ