ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೆಸರಿಗೆ ಮಾತ್ರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳೆ ಗೈರು

ಯಾದಗಿರಿ (ಕೆಂಭಾವಿ):ಏವೂರ ಗ್ರಾಮದ ಜನರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲು ಸರ್ಕಾರಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮಕ್ಕೆ ಅರ್ಥವೇ ಇಲ್ಲದಂತೆ ಎದ್ದು ಕಾಣುತ್ತಿತ್ತು. ಏವೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ೧೭/೧೨/೨೦೨೨ ರಂದು ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿ ಸುಬ್ಬಣ್ಣ ಜಮಖಂಡಿ ಸುರಪುರ ಇವರು ಈ ಕಾರ್ಯಕ್ರಮದಲ್ಲಿ ಗ್ರಾಮದ ಜನರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬಹುದು.ವಿಶೇಷವಾಗಿ ಸರ್ಕಾರದ ವಿವಿಧ ಯೋಜನೆಗಳು ಪಿಂಚಣಿಗಳನ್ನು ಸ್ಥಳದಲ್ಲೆ ಕೊಡುವ ವ್ಯವಸ್ಥೆ ಇದರಲ್ಲಿ ಇದ್ದು ವೃದ್ಧಾಪ್ಯ, ಅಂಗವಿಕಲ,ವಿವಿಧ ಯೋಜನೆಗಳು ಸೇರಿದಂತೆ ಸ್ಥಳದಲ್ಲಿಯೆ ಮಂಜೂರು ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನಲ್ಲಿ ಇಲ್ಲಿವರೆಗೆ ಒಟ್ಟು ೩೮ ಪಿಂಚಣಿ ಫಲಾನುಭವಿಗಳಿಗೆ ನೀಡಿದ್ದು ಸ್ಪಷ್ಟ ದಾಖಲೆ ನೀಡಿದಲ್ಲಿ ಮಾತ್ರ ಜನತೆಗೆ ಸರ್ಕಾರದ ಸೌಲಭ್ಯಗಳು ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.ತಾಲೂಕಾ ವೈದ್ಯಾಧಿಕಾರಿ ಡಾ||ಆರ್.ವಿ.ನಾಯಕ್ ಅವರು ಅ.ಭಾ ಕಾರ್ಡ್ ಈ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಲು ಮುಂದಾಗಿದೆ ಎಂದು ತಾಲೂಕ ವೈದ್ಯಾಧಿಕಾರಿ ನಾಯಕ್ ಹೇಳಿದರು.ಬಿಪಿಎಲ್ ಕಾರ್ಡ್ ಇದ್ದವರಿಗೆ ೫ ಲಕ್ಷ ಮತ್ತು ಎಪಿಎಲ್ ಕಾರ್ಡ್ ಇದ್ದವರಿಗೆ ೧.೫೦ ಲಕ್ಷ ವರೆಗೆ ವೆಚ್ಚದಲ್ಲಿ ದೇಶದ ಯಾವುದೇ ಪ್ರದೇಶದಲ್ಲಿ ಚಿಕಿತ್ಸೆ ಪಡೆದುಕೊಳ್ಳುಲು ಸಹಕಾರಿಯಾಗುತ್ತದೆ.
ಗೈರಾದ ಅಧಿಕಾರಿಗಳು ವಿರುದ್ಧ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಾರ್ಯಕ್ರಮದ ಗೈರಾದ ಅಧಿಕಾರಿಗಳ ವಿರುದ್ಧ ಸುಬ್ಬಣ್ಣ ಜಮಖಂಡಿಯವರು ಗರಂ ಆದರು.ತಳವಾರ್ ಸಮಾಜದ ಮುಖಂಡರು ಅನ್ಯಾಯವಾದರೆ ನ್ಯಾಯ ದೊರಕಿಸಿ ಕೊಡುವುದೇ ಗ್ರಾಮ ವಾಸ್ತವ ಎಂದು ಹೇಳಿದರು.ಆದರೆ
ಏವೂರ ಗ್ರಾಮಸ್ಥರು ತೊಂದರೆಗಳು ಕೇಳಬೇಕಾದ ಅಧಿಕಾರಿಗಳು ಹಾಗೂ
ಜಿಲ್ಲಾಧಿಕಾರಿಗಳ ಗೈರಾಗಿದ್ದು ಮೇಲೆ ನೋಟಕೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅರ್ಥವೇ ಇಲ್ಲದಂತೆ ಆಗಿದೆ.ಜಿಲ್ಲಾಧಿಕಾರಿಗಳ ಬಾರದೇ ಇರುವುದಕ್ಕೆ ಇವರ ವಿರುದ್ಧ ಯಾರಿಗೆ ದೂರು ಕೊಡಬೇಕು ಎಂದು ಏವೂರ ಜನತೆಗೆ ಯಕ್ಷ ಪ್ರಶ್ನೆಯಾಗಿದೆ.ಇದೆ ಸಂದರ್ಭದಲ್ಲಿ ಏವೂರ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ