ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಲೈಡಿಂಗ್ ಗೇಟ್ ಆಕಸ್ಮಿಕವಾಗಿ ಕಳಚಿ ಬಾಲಕ ಸಾವು

ಉತ್ತರ ಕನ್ನಡ/ ಅಂಕೋಲಾ: ನೆರಮನೆಯ ಗೇಟ್ ಬಳಿ ಆಟ ಆಡುತ್ತಿದ್ದ ಪುಟಾಣಿ ಬಾಲಕನ ಮೇಲೆ ಆಕಸ್ಮಿಕವಾಗಿ ಕಳಚಿಕೊಂಡ ಗೇಟ್ ಬಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಬಾಲಕ ಮೃತಪಟ್ಟ ಹೃದಯ ವಿಧ್ರಾವಕ ಘಟನೆ ಪಟ್ಟಣದ ಕನಸಗದ್ದೆ ಸಮೀಪದ ಮುಲ್ಲಾ ವಾಡದಲ್ಲಿ ಸಂಭವಿಸಿದೆ.ಅಜಾಮ ಜಾವೇದ್ ಶೇಖ್ (6) ಮೃತ ದುರ್ದೈವಿ ಬಾಲಕ.

ಡಿ 4 ರ ಬುಧವಾರ ಸಂಜೆ ತಮ್ಮ ಮನೆಯ ಪಕ್ಕದ ಬೇರೋಬ್ಬರ ಮನೆ ಅಂಗಳದ ಎದುರಿನ ಗೇಟ್ ಬಳಿ ಆಟ ಆಡುತ್ತಿದ್ದ ಸಂದರ್ಭದಲ್ಲಿ , ಸ್ಲೈಡಿಂಗ್ ಗೇಟ್ ಆಕಸ್ಮಿಕವಾಗಿ ಕಳಚಿ ಬಂದು ಆಟ ಆಡುತ್ತಿದ್ದ ಪುಟಾಣಿ ಬಾಲಕನ ಮೈಮೇಲೆ ಬಿದ್ದ ಪರಿಣಾಮ ತಲೆಯ ಭಾಗಕ್ಕೆ ಬಲವಾಗಿ ಏಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕನಿಗೆ ಅಂಕೋಲಾ ಆಸ್ವತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆಯ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಅಂಕೋಲಾ ತಾಲೂಕಾ ಆಸ್ಪತ್ರೆ ಶವಾಗಾರಕ್ಕೆ ತಂದಾಗ , ಕನಸಿಗದ್ದೆ ಹಾಗೂ ಸುತ್ತಮುತ್ತಲಿನ ಹಿಂದೂ – ಮುಸ್ಲಿಂ ಬಾಂಧವರು ಸೇರಿ ನೂರಾರು ಜನ ಕಂಬನಿ ಮಿಡಿಯುತ್ತಿರುವ ದೃಶ್ಯ ಕಂಡುಬಂತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಮುಂದುವರೆಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ